More

    ಬೆಂಕಿಗೆ ಚಿಲ್ಲರೆ ಅಂಗಡಿ ಭಸ್ಮ : ಬಾಲಕನಿಗೆ ಗಾಯ

    ಚಾಮರಾಜನಗರ : ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಬೆಂಕಿ ಹೊತ್ತಿಕೊಂಡು ಚಿಲ್ಲರೆ ಅಂಗಡಿ ಸಂಪೂರ್ಣ ಭಸ್ಮಗೊಂಡಿದ್ದು, ಖರೀದಿಗೆ ಬಂದಿದ್ದ ಬಾಲಕನಿಗೆ ಗಾಯವಾಗಿದೆ.


    ರಾತ್ರಿ 8 ಗಂಟೆಯಲ್ಲಿ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವ್ಯಾಪಾರ ಮಾಡುತ್ತಿದ್ದ ಸಿದ್ದರಾಜು ತಕ್ಷಣ ಅಂಗಡಿಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಬಾಲಕ ರವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಗಡಿಯಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಸಂಬಂಧ ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts