ಚಿತ್ರದುರ್ಗ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಜ. 22ರಂದು ಶ್ರೀರಾಮಮಂದಿರ ಲೋಕಾರ್ಪಣೆ ಆಗುತ್ತಿದ್ದು, ಅದರ ಅಂಗವಾಗಿ ಶ್ರೀರಾಮಮಂದಿರ ತೀರ್ಥಕ್ಷೇತ್ರ ಸೇವಾ ಟ್ರಸ್ಟ್, ವಿಎಚ್ಪಿ, ಬಜರಂಗದಳದ ಪದಾಧಿಕಾರಿಗಳು ಬುಧವಾರ ಶ್ರೀ ಬ್ರಹ್ಮನಿಷ್ಠಾನಂದ ಸ್ವಾಮೀಜಿ ಅವರಿಗೆ ಮಂತ್ರಾಕ್ಷತೆ, ಆಹ್ವಾನ ಪತ್ರಿಕೆ ವಿತರಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬದರಿನಾಥ್, ಬಿಜೆಪಿ ಯುವ ಮುಖಂಡ ಡಾ.ಸಿದ್ಧಾರ್ಥ್ ಗುಂಡಾರ್ಪಿ, ಆರ್ಎಸ್ಎಸ್ ಮುಖಂಡ ರಾಜಕುಮಾರ್, ವಿಎಚ್ಪಿ ಜಿಲ್ಲಾ ಸಹ ಕಾರ್ಯದರ್ಶಿ ಕೇಶವ್, ಮುಖಂಡ ಬಿ.ಎನ್.ಭಾನುಮೂರ್ತಿ ಇತರರಿದ್ದರು.