More

    ಭೋವಿ ಗುರುಪೀಠಕ್ಕೆ ಭೇಟಿ

    ಬಾಗಲಕೋಟೆ: ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ, ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರು ಗುರುವಾರ ಇಲ್ಲಿನ ಭೋವಿ ಪೀಠಕ್ಕೆ ಭೇಟಿ ನೀಡಿ ಹಲವು ಮಠಾಧೀಶರ ಆಶೀರ್ವಾದ ಪಡೆದರು.

    ಹರಿಹರ ಪಂಚಮಸಾಲಿಪೀಠದ ಜಗದ್ಗುರು  ಶ್ರೀವಚನಾನಂದ ಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ‍ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಇಮ್ಮಡಿ ಶ್ರೀ ಸಿದ್ದರಾಮ ಸ್ವಾಮೀಜಿ, ಮಡಿವಾಳ ಮಾಚಿದೇವ ಸ್ವಾಮೀಜಿ ಮತ್ತಿತರ ಹರಗುರು ಚರಮೂರ್ತಿಗಳು ಸಚಿವ ಶಿವಾನಂದ ಪಾಟೀಲ, ಮತ್ತು ಸಂಯುಕ್ತ ಪಾಟೀಲ ಅವರನ್ನು ಶಾಲು ಹೊದಿಸಿ ಆಶೀರ್ವದಿಸಿದರು.

    ಶಾಸಕ ಬಿ.ಬಿ. ಚಿಮ್ಮನಕಟ್ಟಿ, ಪ್ರಕಾಶ್‌ ತಪಶೆಟ್ಟಿ, ಜಿಲ್ಲಾ ಕಾಂಗ್ರೆಸ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts