ಮೂಡಲಗಿ: ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ನಾಡಿನ ಮಠಮಾನ್ಯಗಳ ಪಾತ್ರ ಮಹತ್ವದ್ದು ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು. ತಾಲೂಕಿನ ಹುಣಶ್ಯಾಳ ಪಿಜಿಯ ಕೈವಲ್ಯಾಶ್ರಮದ ಸಿದ್ದಲಿಂಗೇಶ್ವರ ಮಠದ ನಿಜಗುಣ ದೇವರ ಷಷ್ಟ್ಯಬ್ದಿ ಕಾರ್ಯಕ್ರಮದಲ್ಲಿ ಬುಧವಾರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ನಾಡಿನ ಸಂಸ್ಕೃತಿ ಪರಂಪರೆ, ಸಂಸ್ಕಾರ, ಶಿಕ್ಷಣ ಪ್ರಸಾರ ಹಾಗೂ ಆಧ್ಯಾತ್ಮಿಕ ಚಿಂತನೆಗಳ ಪ್ರಸಾರದಲ್ಲಿ ಮಠಗಳ ಕೊಡುಗೆ ಅಪಾರ ಎಂದರು.
ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯರು, ಬೈಲೂರ ನಿಜಗುಣಾನಂದರು, ವೀರಗೋಟ ಅಡವಿಲಿಂಗ ಮಹಾರಾಜರು, ನರಸಿಪುರದ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಹಂದಿಗುಂದ ಶಿವಾನಂದ ಶ್ರೀಗಳು, ಶೇಗುಣಿಸಿ ಡಾ.ಮಹಾಂತಪ್ರಭುಗಳು, ನಿಜಗುಣ ದೇವರು, ತೊಂಡಿಕಟ್ಟಿ ವೆಂಕಟೇಶ ಮಹಾರಾಜರು, ಮಾಜಿ ಶಾಸಕರಾದ ಡಿ.ಆರ್.ಪಾಟೀಲ, ಮಹಾಂತೇಶ ಕವಟಗಿಮಠ, ಬೀಳಗಿ ಶಾಸಕ ಜಿ.ಟಿ.ಪಾಟೀಲ, ಡಾ.ಗಿರೀಶ ಸೋನವಾಲಕರ, ಶ್ಯಾಮಾನಂದ ಪೂಜೇರಿ ಇತರರಿದ್ದರು.