More

    ಮಣ್ಣು ಪರೀಕ್ಷೆ ಕಾರ್ಯಾಗಾರ

    ಸೋಮವಾರಪೇಟೆ: ಕಾಫಿ ಮಂಡಳಿ ಮತ್ತು ಭುವನ ಮಂದಾರ ರೈತ ಉತ್ಪಾದಕ ಸಂಸ್ಥೆ ಸಹಯೋಗದೊಂದಿಗೆ ಈ ಕಾಮ್ ಕಮಾಡಿಟೀಸ್ ವತಿಯಿಂದ ಮಣ್ಣು ಪರೀಕ್ಷೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮಹಿಳಾ ಸಮಾಜ ಸಭಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿತ್ತು.

    ಕಾರ್ಯಕ್ರಮದಲ್ಲಿ ಈ ಕಾಮ್ ಕಮಾಡಿಟೀಸ್ ಕಂಪನಿಯ ಮುಖ್ಯಸ್ಥ ಡಾ. ಚಂಗಲ ರಾಯಪ್ಪ, ಸುಸ್ಥಿರ ಕಾಫಿ ಕೃಷಿಯಲ್ಲಿ ಮಣ್ಣಿನ ಮಹತ್ವದ ಬಗ್ಗೆ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರತೀಯ ಕಾಫಿಯ ಪ್ರಾಮುಖ್ಯದ ಬಗ್ಗೆ ಮಾಹಿತಿ ನೀಡಿದರು. ಕಾಫಿ ಮಂಡಳಿಯ ಉಪನಿರ್ದೇಶಕ ಡಾ.ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾಫಿ ಬೆಳೆಗಾರರಿಗೆ ಕಾಫಿ ಮಂಡಳಿಯಿಂದ ಸಿಗುವ ಸೌಲಭ್ಯಗಳ ಬಗ್ಗೆ ವಿವರಿಸಿದರು.

    ಭುವನ ಮಂದಾರ ರೈತ ಉತ್ಪಾದಕ ಕಂಪೆನಿಯ ಅಧ್ಯಕ್ಷ ಎಸ್.ಎಂ. ಡಿಸಿಲ್ವ ಮಾತನಾಡಿ, ಮಣ್ಣು ಪರೀಕ್ಷೆ ಮಾಡಿ, ವರದಿಯ ಆಧಾರದ ಮೇಲೆ ನಿಗದಿತ ಪ್ರಮಾಣದಲ್ಲಿ ರಾಸಾಯನಿಕ ಗೊಬ್ಬರ ಹಾಕಿದರೆ ಉತ್ತಮ ಇಳುವರಿ ಸಾಧ್ಯ. ಈ ಕ್ರಮದಿಂದ ಉತ್ಪಾದನಾ ವೆಚ್ಚವೂ ಕಡಿಮೆಯಾಗಲಿದೆ ಎಂದು ಅಭಿಪ್ರಾಯಿಸಿದರು. ಅವಕಾಶ ಸಿಕ್ಕಾಗ ಕಾಫಿ ಬೆಳೆಗಾರರು ಮಣ್ಣಿನ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

    ಕಾಫಿ ಮಂಡಳಿಯ ಮಣ್ಣು ವಿಜ್ಞಾನಿ ಡಾ.ಎಸ್.ಎ.ನದಾಫ್ ಮಾತನಾಡಿ, ಆಮ್ಲೀಯ ಮಣ್ಣನ್ನು ಸರಿಪಡಿಸಿಕೊಳ್ಳಲು ಬೇಕಾಗುವ ಕ್ರಮಗಳ ಬಗ್ಗೆ ವಿವರಿಸಿದರು ಹಾಗೂ ಬೆಳೆಗಾರರು ತಂದ ಮಣ್ಣನ್ನು ಪರೀಕ್ಷೆ ನಡೆಸಿ, ಸುಣ್ಣವನ್ನು ಶಿಫಾರಸು ಮಾಡಿ ವರದಿಯನ್ನು ಸ್ಥಳದಲ್ಲಿ ನೀಡಿದರು. ಇ-ಕಾಮ್ ಸಂಸ್ಥೆಯ ತಾರಾ ಕಾರ್ಯಕ್ರಮವನ್ನು ನಿರ್ವಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts