More

    ಮತದಾನ ಜಾಗೃತಿ ಜಾಥಾ

    ಬೇಲೂರು: ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಶುಕ್ರವಾರ ರಾತ್ರಿ ಚನ್ನಕೆಶವಸ್ವಾಮಿ ದೇಗುಲ ಆವರಣದಲ್ಲಿ ಪುರಸಭೆಯಿಂದ ಆಯೋಜಿಸಿದ್ದ ಮೇಣದ ಬತ್ತಿ ಜಾಥಾಗೆ ತಾಪಂ ಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷೆ ಸುನೀತಾ ಚಾಲನೆ ನೀಡಿದರು.

    ನಂತರ ಮಾತನಾಡಿ, ಮತದಾನದ ಜಾಗೃತಿಗಾಗಿ ನಾವು ಸಾಕಷ್ಟು ಕಾರ್ಯಕ್ರಮಗಳ ಮೂಲಕ ಮತದಾರರಲ್ಲಿ ಅರಿವು ಮೂಡಿಸುತ್ತಿದ್ದೇವೆ. ಸಂವಿಧಾನಾತ್ಮಕವಾಗಿ ಸಿಕ್ಕ ಹಕ್ಕು ಮತ್ತು ಅವಕಾಶವನ್ನು ಪ್ರತಿಯೊಬ್ಬರೂ ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಮತಗಟ್ಟೆಗೆ ತೆರಳಿ ಮತಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂಬ ನಿಟ್ಟಿನಲ್ಲಿ ಪುರಸಭೆ, ವಿವಿಧ ಇಲಾಖೆ ಸಹಯೋಗದೊಂದಿಗೆ ಮೇಣದ ಬತ್ತಿ ಜಾಥಾ ಮೂಲಕ ಅರಿವು ಮೂಡಿಸುತ್ತಿದ್ದೇವೆ ಎಂದರು.

    ಚನ್ನಕೇಶವಸ್ವಾಮಿ ದೇಗುಲ ಆವರಣದಿಂದ ಹೊರಟ ಮೇಣದಬತ್ತಿ ಜಾಥಾವು ಪಟ್ಟಣದ ಕೆಂಪೇಗೌಡ ವೃತ್ತ, ಸರ್ಕಾರಿ ಆಸ್ಪತ್ರೆ, ಹರ್ಡಿಕರ್ ವೃತ್ತದ ಮೂಲಕ ಬಸವೇಶ್ವರ ವೃತ್ತದವರೆಗೆ ಸಾಗಿತು.

    ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್, ಸಂಪನ್ಮೂಲ ವ್ಯಕ್ತಿ ತಮ್ಮಣ್ಣಗೌಡ, ಪುರಸಭೆ ಆರೋಗ್ಯಾಧಿಕಾರಿ ಲೋಹಿತ್, ಸಿಬ್ಬಂದಿ ಪುಷ್ಪ, ಲೋಕೇಶ್, ಮೋಹನ್ ಸೇರಿದಂತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts