ಚಿತ್ರದುರ್ಗ: ಸಂಕ್ರಾಂತಿ ಹಬ್ಬದ ಅಂಗವಾಗಿ ಚಿತ್ರದುರ್ಗದ ರಂಗಯ್ಯನ ಬಾಗಿಲು ಸಮೀಪದ ಮದಕರಿ ಮಹಾಗಣಪತಿ ಸ್ವಾಮಿಗೆ ವಿವಿಧ ಬಗೆಯ ಪುಷ್ಪಗಳಿಂದ ಸೋಮವಾರ ವಿಶೇಷವಾಗಿ ಅಲಂಕರಿಸಲಾಗಿತ್ತು.
ಬೆಳಗ್ಗೆಯಿಂದ ರಾತ್ರಿವರೆಗೂ ಸ್ವಾಮಿಯ ದರ್ಶನಕ್ಕಾಗಿ ನೂರಾರು ಭಕ್ತರು ದೇಗುಲಕ್ಕೆ ಭೇಟಿ ನೀಡಿದರು. ಇದೇ ವೇಳೆ ಪೂಜೆ ಸಲ್ಲಿಸಿ, ಇಷ್ಟಾರ್ಥ ಈಡೇರಿಕೆಗಾಗಿ ಪ್ರಾರ್ಥಿಸಿಕೊಂಡರು.