ರಿಪ್ಪನ್ಪೇಟೆ: ಸಮೀಪದ ಹಾಲುಗುಡ್ಡೆ ಗ್ರಾಮದ ಕ್ಯಾಂಪ್ನಲ್ಲಿ ಪ್ರಿಯತಮ ಮದುವೆಯಾಗಲು ನಿರಾಕರಿಸಿದ್ದರಿಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಹಾಲುಗುಡ್ಡೆ ಕ್ಯಾಂಪ್ನಲ್ಲಿ ಅನುಷಾ (19) ಮೃತ ಯುವತಿ. ಶನಿವಾರ ಮನೆಯಲ್ಲಿದ್ದಾಗ ಕೀಟನಾಶಕ ಕುಡಿದು ತನ್ನ ಪ್ರಿಯಕರನಿಗೆ ಕರೆ ಮಾಡಿ ವಿಷ ಸೇವಿಸಿರುವುದಾಗಿ ತಿಳಿಸಿದ್ದಾಳೆ. ಕೂಡಲೆ ಪಕ್ಕದ ನೆವಟೂರು ಪ್ರಿಯಕರ ಮಂಜುನಾಥ್ ಯುವತಿಯನ್ನು ಆನಂದಪುರ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆಗ್ಗಾನ್ನಲ್ಲಿ ಭಾನುವಾರ ಬೆಳಗ್ಗೆ ಅನುಷಾ ಮೃತಪಟ್ಟಿದ್ದಾಳೆ
ಅನುಷಾ ಎಂಟನೇ ತರಗತಿ ಬಳಿ ಕೂಲಿ ಕೆಲಸ ಮಾಡಿಕೊಂಡಿದ್ದು ನೆವಟೂರು ಗ್ರಾಮದ ಮಂಜುನಾಥ್ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದನು. ಕೆಲವು ದಿನಗಳ ಹಿಂದೆ ಈಕೆಯ ಅಣ್ಣನ ಮನೆಗೆ ಗಾರೆ ಕೆಲಸಕ್ಕೆ ಹೋಗಿದ್ದ ಮಂಜುನಾಥನಿಗೆ ಅನುಷಾ ಪರಿಚಯವಾಗಿದ್ದಾಳೆ. ಪರಿಚಯ ಪ್ರೀತಿಗೆ ತಿರುಗಿದ್ದು ಇಬ್ಬರೂ ಫೋನ್ ನಂಬರ್ ವಿನಿಮಯ ಮಾಡಿಕೊಂಡಿದ್ದರು. ಇಬ್ಬರು ಅನ್ಯ ಜಾತಿಯವರಾಗಿದ್ದ ಕಾರಣ ಹುಡುಗ ಮದುವೆ ವಿಚಾರದಲ್ಲಿ ಒಪ್ಪಿಕೊಳ್ಳದಿದ್ದರಿಂದ ಅನುಷಾ ವಿಷ ಸೇವಿಸಿರುವುದಾಗಿ ಆಕೆಯ ತಂದೆ ಬಂಗಾರಪ್ಪ ರಿಪ್ಪನ್ಪೇಟೆ ಪೊಲೀಸರಿಗೆ ದೂರು ನೀಡಿದ್ದಾರೆ. ಯುವತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸುವವರೆಗೂ ಜತೆಗಿದ್ದ ಯುವಕ ಬೆಳಗ್ಗೆಯುವತಿ ಮೃತಪಟ್ಟಾಗಿನಿಂದ ನಾಪತ್ತೆಯಾಗಿದ್ದಾನೆ.