More

    ಮದುವೆಗೆ ವಿರೋಧ ಪ್ರೇಮಿಗಳ ಆತ್ಮಹತ್ಯೆ

    ಬಸವಕಲ್ಯಾಣ: ಪರಸ್ಪರ ಪ್ರೀತಿಸುತ್ತಿದ್ದ ಪ್ರೇಮಿಗಳಿಬ್ಬರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಲಖೋರಾ ತಾಂಡಾ ಸಮೀಪ ಬುಧವಾರ ಬೆಳಗ್ಗೆ ಜರುಗಿದೆ. ಪ್ರೇಮಿಗಳ ದಿನಾಚರಣೆಗೆ ಕೆಲವೇ ದಿನಗಳ ಮುನ್ನ ಪ್ರೀತಿ-ಪ್ರೇಮದಲ್ಲಿ ಸಿಲುಕಿದ ಈ ಜೋಡಿಯ ಬದುಕು ದುರಂತದಲ್ಲಿ ಅಂತ್ಯ ಕಂಡಿದೆ.

    ಕಲಬುರಗರ್ಿ ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಗ್ರಾಮದ ರಮೇಶ ಭೀಮಶಾ ಬೇಡರ್(28) ಹಾಗೂ ಅದೇ ಗ್ರಾಮದ ಭೀಮಾಬಾಯಿ ಅಶೋಕ ರಾಠೋಡ್(19) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

    ಈ ಇಬ್ಬರು ಕಳೆದೆರಡು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರು ಮದುವೆಯಾಗಲು ತಯಾರಿ ಕೂಡಾ ನಡೆಸಿದ್ದರು. ಆದರೆ ಇವರಿಬ್ಬರ ಜಾತಿ ಬೇರೆ ಬೇರೆಯಾಗಿರುವ ಕಾರಣ ವಿವಾಹಕ್ಕೆ ಮನೆಯವರಿಂದ ವಿರೋಧವಿತ್ತು ಎಂದು ತಿಳಿದುಬಂದಿದೆ. ಆದರೆ ಮನೆಯವರು ಈಗ ಇದನ್ನು ಅಲ್ಲಗಳೆಯುತ್ತಿದ್ದಾರೆ ಎನ್ನಲಾಗಿದೆ.

    ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ದಿನಗಳ ಹಿಂದೆ ಹಿರಿಯರ ಸಮ್ಮುಖದಲ್ಲಿ ಪರಸ್ಪರ ರಾಜೀ ಸಂಧಾನದ ಮೂಲಕ ಜಗಳ ಬಗೆಹರಿಸಿ ಇಬ್ಬರಿಗೂ ದೂರ ಇರುವಂತೆ ಸೂಚಿಸಲಾಗಿತ್ತು ಎಂದು ತಿಳಿದುಬಂದಿದೆ. ಮದುವೆಗೆ ಒಪ್ಪಿದ್ದರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಯುವತಿಯ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

    ಸಿಪಿಐ ರಘುವೀರ ಸಿಂಗ್ ಠಾಕೂರ್, ಮುಡುಬಿ ಪಿಎಸ್ಐ ಬಸಲಿಂಗಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts