More

    ಮದುವೆಗೆ ಹೊರಟವರು ಮಸಣ ಸೇರಿದರು

    ನಿಪ್ಪಾಣಿ: ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಒಂದೇ ಕುಟುಂಬದ ನಾಲ್ವರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಕರಣ ತಾಲೂಕಿನ ಸ್ತವನಿಧಿ ಬಳಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ. ನಿಪ್ಪಾಣಿಯ ಸಾಯಿಶಂಕರ ನಗರದ ಆದಗೊಂಡ ಬಾಬು ಪಾಟೀಲ (60), ಛಾಯಾ ಆದಗೊಂಡ ಪಾಟೀಲ (55), ನಿಪ್ಪಾಣಿ ತಾಲೂಕಿನ ಬೋರಗಾವವಾಡಿಯ ಮಹೇಶ ದೇವಗೊಂಡ ಪಾಟೀಲ (23), ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ರಾಧಾ ನಗರದ ಚಂಪಾತಾಯಿ ಮಗದುಮ್ಮ (80) ಮೃತಪಟ್ಟ ದುರ್ದೈವಿಗಳು. ಸ್ತವನಿಧಿಯ ಬ್ರಹ್ಮನಾಥ ಭವನದಲ್ಲಿ ಶುಕ್ರವಾರ ಮಧ್ಯಾಹ್ನ ಮದುವೆ ನಿಗದಿಯಾಗಿತ್ತು. ಈ ಮದುವೆಗೆ ಕಾರಿನಲ್ಲಿ ಬರುತ್ತಿದ್ದ ನಾಲ್ವರು ಸ್ತವನಿಧಿಯಿಂದ ಸುಮಾರು 500 ಮೀ.ಅಂತರದಲ್ಲಿ ಅಪಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಬೆಳಗಾವಿಯಿಂದ ನಿಪ್ಪಾಣಿಗೆ ಬರುತ್ತಿದ್ದ ಕಂಟೇನರ್ ಘಟ್ಟದ ಇಳಿಜಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಹೆದ್ದಾರಿಯ ಸರ್ವೀಸ್ ರಸ್ತೆಗೆ ಇಳಿದಿದೆ. ಅದೇ ಮಾರ್ಗದಲ್ಲಿ ಬರುತ್ತಿದ್ದ ಕಾರಿಗೆ ರಭಸದಿಂದ ಗುದ್ದಿದೆ.

    ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು, ಮೃತಪಟ್ಟವರ ದೇಹಗಳು ಕಾರಿನಲ್ಲೇ ಸಿಲುಕಿದ್ದವು. ಮೃತದೇಹಗಳನ್ನು ಜೆಸಿಬಿ ಸಹಾಯದಿಂದ ಹೊರತೆಗೆಯಲಾಯಿತು. ಕಂಟೇನರ್ ಚಾಲಕನೂ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಚಿಕ್ಕೋಡಿ ಡಿವೈಎಸ್‌ಪಿ ಬಸವರಾಜ ಯಲಿಗಾರ ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts