More

    ಮನೆ ಮನೆಗೆ ಕಾಂಗ್ರೆಸ್ ಯೋಜನೆ ತಿಳಿಸಿ

    ಕೆ.ಆರ್.ನಗರ: ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಜಾರಿಗೆ ತಂದ ಜನಪ್ರಿಯ ಯೋಜನೆಗಳು ಹಾಗೂ ಬಿಜೆಪಿ ಸರ್ಕಾರದ ದುರಾಡಳಿತವನ್ನು ಜನರಲ್ಲಿ ಮನವರಿಕೆ ಮಾಡುವ ಮೂಲಕ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟನೆ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಜಿಲ್ಲಾಧ್ಯಕ್ಷ ಪಿ.ಮಲ್ಲೇಶ್ ಕೋಟೆ ಹೇಳಿದರು.

    ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಇಡೀ ದೇಶದಲ್ಲೇ ಪಂಚಾಯತ್ ರಾಜ್ ಹೆಸರಿನಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದವರು ದಿ.ರಾಜೀವ್ ಗಾಂಧಿ. ಈ ಮೂಲಕ ನಾವೆಲ್ಲ ಇಂದು ಸ್ಥಳೀಯ ಸಂಸ್ಥೆಗಳಲ್ಲಿ ಸದಸ್ಯರು, ಅಧ್ಯಕ್ಷರಾಗಲು ಕಾರಣರಾಗಿದ್ದಾರೆ. ಆದ್ದರಿಂದ ಅವರ ಹೆಸರಲ್ಲೇ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ನಡಿಗೆ ಗ್ರಾಮ ಪಂಚಾಯಿತಿಗಳ ಕಡೆಗೆ ಎಂಬ ಘೋಷ ವಾಕ್ಯದೊಂದಿಗೆ ಪ್ರತಿ ಗ್ರಾಮಕ್ಕೆ ತೆರಳಿ ಪಂಚಾಯತ್ ರಾಜ್ ವ್ಯವಸ್ಥೆಯ ಕಲ್ಪನೆಯನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡಲಾಗುತ್ತಿದೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

    ಬಿಜೆಪಿ ದೇಶ ಪ್ರೇಮದ ಹೆಸರಿನಲ್ಲಿ ಯುವಕರನ್ನು ಹುಚ್ಚೆಬ್ಬಿಸಿ ಮಂತ್ರಮುಗ್ಧರನ್ನಾಗಿ ಮಾಡಿ ಮತಗಳಾಗಿ ಪರಿವರ್ತನೆ ಮಾಡಿಕೊಳ್ಳುತ್ತಿದೆ. ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುತ್ತ ಯುವಕರಿಗೆ ಉದ್ಯೋಗ ನೀಡದೆ ಮೋಸ ಮಾಡುತ್ತಿದೆ. ಅಲ್ಲದೆ, ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯುವ ಜೆಡಿಎಸ್ ಪಕ್ಷವನ್ನು ಅಧಿಕಾರದಿಂದ ದೂರ ಇಡಬೇಕು ಎಂದರು.

    ಕೆ.ಆರ್.ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್.ಮಹದೇವ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಶಂಕರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಮಿತಿ ಅಧ್ಯಕ್ಷ ವಾಸಿಂ ಪಾಷಾ, ಕಾರ್ಯದರ್ಶಿ ರವಿ, ಮಹಿಳಾ ಸಮಿತಿ ಅಧ್ಯಕ್ಷೆ ಸುನಿತಾ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts