More

    ಮಳೆಗೆ ಹುಬ್ಬಳ್ಳಿ- ಲಕ್ಷ್ಮೇಶ್ವರ ಮುಖ್ಯ ರಸ್ತೇಲಿ ಕುಸಿದ ಸೇತುವೆ

    ಸಂಶಿ: ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಹುಬ್ಬಳ್ಳಿ-ಲಕ್ಷ್ಮೇಶ್ವರ ಮುಖ್ಯ ರಸ್ತೆಯಲ್ಲಿರುವ ಶಿರೂರ ಗ್ರಾಮದ ಬಳಿ ಮಂಗಳವಾರ ರಾತ್ರಿ ಸೇತುವೆ ಕುಸಿದಿದೆ.

    ಮಳೆಗೆ ಸೇತುವೆ ಕುಸಿದ ಪರಿಣಾಮ ಹುಬ್ಬಳ್ಳಿ-ಲಕ್ಷ್ಮೇಶ್ವರ ಮುಖ್ಯ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ಕಡಿತಗೊಳಿಸಲಾಗಿದೆ. ತಾತ್ಕಾಲಿಕವಾಗಿ ಬೇರೆಡೆ ಪರ್ಯಾಯ ಮಾರ್ಗದಲ್ಲಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲ ತಿಂಗಳ ಹಿಂದೆಯೇ ಅಲ್ಲಲ್ಲಿ ಈ ಸೇತುವೆ ಬಿರುಕು ಬಿಟ್ಟಿದ್ದು, ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬುದು ಸಾರ್ವಜನಿಕರ ದೂರು. ಸ್ಥಳಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಹಾಗೂ ಸಿಪಿಐ ಬಸವರಾಜ ಕಲ್ಲಮ್ಮನವರ ಭೇಟಿ ನೀಡಿ ಪರಿಶೀಲಿಸಿದರು.

    ಮಳೆಗೆ ಕುಸಿದ ಸೇತುವೆಯಿಂದ ತಾತ್ಕಾಲಿಕವಾಗಿ ಹುಬ್ಬಳ್ಳಿ-ಲಕ್ಷ್ಮೇಶ್ವರ ಮುಖ್ಯ ರಸ್ತೆ ಬಂದ್ ಮಾಡಿ ಪರ್ಯಾಯವಾಗಿ ಸಂಶಿಯಿಂದ ಬಸಾಪೂರ ಮಾರ್ಗವಾಗಿ ಶಿರೂರ ಮೂಲಕ ಮುಖ್ಯ ರಸ್ತೆಗೆ ತಲುಪಲು ವಾಹನಗಳಿಗೆ ಸಂಚಾರ ವ್ಯವಸ್ಥೆ ಕಲ್ಪಿಸಲಾಗುವುದು. ಹಿರಿಯ ಅಧಿಕಾರಿಗಳೊಂದಿಗೆ ರ್ಚಚಿಸಿ ಶೀಘ್ರವಾಗಿ ಸೇತುವೆ ದುರಸ್ತಿ ಮಾಡಲಾಗುವುದು.

    | ಶರಣಕುಮಾರ ದ್ವಾರನಹಳ್ಳಿ

    ಸಹಾಯಕ ಇಂಜಿನಿಯರ್, ಪಿಡಬ್ಲ್ಯುಡಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts