More

    ಮಳೆ ಸಂತ್ರಸ್ತರಿಗೆ ಪರಿಹಾರ ನೀಡಲು ಆಗ್ರಹ

    ಹಳಿಯಾಳ: ಅಕಾಲಿಕವಾಗಿ ಆರಂಭಗೊಂಡಿರುವ ಮಳೆಯಿಂದ ಬೆಳೆ, ತರಕಾರಿ ಮತ್ತು ಪುಷ್ಪ ಹಾನಿಗೊಳಗಾದ ರೈತರಿಗೆ, ಮೀನುಗಾರಿಕೆ ಮತ್ತು ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಶಾಸಕ ಆರ್.ವಿ. ದೇಶಪಾಂಡೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕಂದಾಯ ಸಚಿವ ಆರ್. ಅಶೋಕ, ಕೃಷಿ ಸಚಿವ ಬಿ.ಸಿ. ಪಾಟೀಲ, ತೋಟಗಾರಿಕೆ ಸಚಿವ ಕೆ.ಸಿ. ನಾರಾಯಣಗೌಡ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರಿಗೆ ಗುರುವಾರ ಪತ್ರ ಬರೆದಿದ್ದಾರೆ. ಈ ವರ್ಷ ಹಿಂದೆಂದಿಗಿಂತಲೂ ಹೆಚ್ಚು ಪ್ರದೇಶದಲ್ಲಿ ಭತ್ತ, ಕಬ್ಬು, ಮೆಕ್ಕೆಜೋಳ, ಹತ್ತಿ, ತರಕಾರಿ ಹಾಗೂ ತೋಟಗಾರಿಕೆ ಬೆಳೆ ಬೆಳೆದು ಬಂಪರ್ ಇಳುವರಿ ನಿರೀಕ್ಷಿಸಲಾಗಿತ್ತು. ಆದರೆ, ಫಸಲು ಕಟಾವು ಹಂತದಲ್ಲಿರುವಾಗಲೇ ಗಾಯದ ಮೇಲೆ ಬರೆ ಎಳೆದಂತೆ ಸುರಿದ ಅಕಾಲಿಕ ಮಳೆಗೆ ಎಲ್ಲವೂ ಕೊಚ್ಚಿಹೋಗಿ, ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತಾಗಿದೆ. ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯನ್ನುಂಟು ಮಾಡಿದೆ. ಒಟ್ಟಾರೆಯಾಗಿ ಜನರ ಜೀವನ ದುಸ್ತರವಾಗಿದೆ. ಕರಾವಳಿ ಪ್ರದೇಶದಲ್ಲಿ ಗಾಳಿ ಸಮುದ್ರದ ಅಲೆಗಳ ಅಬ್ಬರಕ್ಕೆ ಮತ್ಸೊ್ಯೕದ್ಯಮ ಸಂಪೂರ್ಣ ತತ್ತರಿಸಿದ್ದು, ಮೀನುಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ. ಜನವಸತಿ ಪ್ರದೇಶಗಳಿಗೂ ಮಳೆ ನೀರು ನುಗ್ಗಿ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿ-ಪಾಸ್ತಿಗಳಿಗೆ ಹಾನಿ ಉಂಟಾಗಿರುತ್ತದೆ. ಭಾಗಶಃ/ಪೂರ್ಣ ಪ್ರಮಾಣದ ಮನೆಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ, ರೈತರಿಗೆ, ಕೂಲಿ ಕಾರ್ವಿುಕರಿಗೆ ನೆರವಾಗಬೇಕಾಗಿರುವುದು ಅತೀ ಅವಶ್ಯವಾಗಿದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts