ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ಮಹರ್ಷಿ ಭಗೀರಥ ಜಯಂತಿಯನ್ನು ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ ಭಗೀರಥರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಅರ್ಪಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ ಸೇರಿದಂತೆ ಸಮುದಾಯದ ಮುಖಂಡರಾದ ಟಿ.ಎಂ.ತಿಪ್ಪಣ್ಣವರ, ಅಶೋಕ ಕಾಳೆ, ಅಶೋಕ ಪ್ರಧಾನಿ, ದಾತ್ತಾ ಪ್ರಧಾನಿ, ದತ್ತು ಲೋನಾರಿ, ಪ್ರಮೋದ ಲಟಗೇರಿ, ದಶರಥ ಗೋವಿಂದ, ರಾಜೇಂದ್ರ, ಸಂತೋಷ, ಸುನೀಲ್, ವೀರನಗೌಡ ಪಾಟೀಲ ಹಾಗೂ ಇತರರು ಇದ್ದರು.