More

    ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ

    ರಾಯಚೂರು
    ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‌್ಯಾಲಿ ನಡೆಸುವ ಮೂಲಕ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದಿಂದ ಬುಧವಾರ ಕಾರ್ಗಿಲ್ ವಿಜಯೋತ್ಸವ ಆಚರಿಸಲಾಯಿತು.
    ಸ್ಥಳೀಯ ಎಲ್‌ವಿಡಿ ಕಾಲೇಜಿನಿಂದ ಆರಂಭಗೊಂಡ ಬೈಕ್ ರ‌್ಯಾಲಿ ಪ್ರಮುಖ ರಸ್ತೆಗಳ ಮೂಲಕ ಹಾದು ಅಂಬೇಡ್ಕರ್ ವೃತ್ತಕ್ಕೆ ಆಗಮಿಸಿ ಜಿಲ್ಲಾ ಕ್ರೀಡಾಂಗಣದ ಪಕ್ಕದಲ್ಲಿರುವ ಗಾಂೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮುಕ್ತಾಯಗೊಳಿಸಲಾಯಿತು.
    ರ‌್ಯಾಲಿ ಸಂದರ್ಭದಲ್ಲಿ ಜೈ ಜವಾನ್, ಜೈ ಕಿಸಾನ್ ಘೋಷಣೆಗಳನ್ನು ಕೂಗಲಾಯಿತು. ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಚೆನ್ನಾರೆಡ್ಡಿ ಮಾತನಾಡಿ, ಹಲವಾರು ಸೈನಿಕರ ತ್ಯಾಗ ಬಲಿದಾನದಿಂದ ಕಾರ್ಗಿಲ್‌ನಲ್ಲಿ ಜಯಗಳಿಸಲು ಸಾಧ್ಯವಾಗಿದ್ದು, ಯೋಧರ ವಿಜಯದ ಸಂಕೇತವಾಗಿ ಪ್ರತಿವರ್ಷ ಕಾರ್ಗಿಲ್ ವಿಜಯೋತ್ಸವ ಆಚರಿಸುವ ಮೂಲಕ ಇಂದಿನ ಪೀಳಿಗೆಗೆ ಯೋಧರ ತ್ಯಾಗ, ಬಲಿದಾನದ ಬಗ್ಗೆ ತಿಳಿಯುವಂತೆ ಮಾಡಲಾಗುತ್ತಿದೆ ಎಂದರು.
    ಈ ಸಂದರ್ಭದಲ್ಲಿ ಸಂಘದ ಪದಾಕಾರಿಗಳಾದ ಅಲಿ ಮಲಬಾರ್, ಕೆ.ಎಸ್.ರಾವ್, ನರಸಿಂಹಲು, ಮನೋಹರ ಸಿಂಗ್, ಕಿಷನ್ ಪ್ರಸಾದ, ಗೋವಿಂದ, ಹನುಮಂತು, ನಾರಾಯಣ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts