More

    ಮಾರಿಕಾಂಬಾ ದೇಗುಲ ಅಧ್ಯಕ್ಷರ ಮನೆ ಮುಂದೆ ಮಾಟ!

    ಶಿರಸಿ: ಇಲ್ಲಿನ ಮಾರಿಕಾಂಬಾ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ವೆಂಕಟೇಶ ನಾಯ್ಕ ಅವರ ಮನೆ ಎದುರು ಗುರುವಾರ ತಡರಾತ್ರಿ ಕಿಡಿಗೇಡಿಗಳು ಮಾಟ ಮಾಡಿ ಕುಂಬಳಕಾಯಿ ಒಡೆದಿದ್ದಾರೆ.

    ಕುಂಬಳಕಾಯಿ, ಲಿಂಬು, ಹಿಟ್ಟಿನ ಬೊಂಬೆ ಮಾಡಿ ಅದಕ್ಕೆ ಕಪ್ಪು ದಾರ ಸುತ್ತಿ ಅದರ ಮೇಲೆ ಕುಂಕುಮ ಚೆಲ್ಲಿ ಹೋಗಿದ್ದಾರೆ. ವೆಂಕಟೇಶ ನಾಯ್ಕ ಅವರು ಎಂದಿನಂತೆ ಬೆಳಗ್ಗೆ ವಾಕಿಂಗ್​ಗೆ ಹೋಗಬೇಕೆಂದು ಮನೆಯ ಗೇಟ್ ಬಳಿ ಬಂದಾಗ ಈ ದೃಶ್ಯ ಕಂಡು ಬಂದಿದೆ. ಇದನ್ನೂ ನೋಡಿದ ಅವರು ಭಯಭೀತರಾಗಿ ತಮ್ಮ ಆಪ್ತರಿಗೆ ಹಾಗೂ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ನಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳು ಮನೆ ಎದುರು ಮಾಟಮಂತ್ರ ಮಾಡಿ ಎಸೆದು ಹೋಗಿರುವ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಸಾಧ್ಯತೆ ಇದ್ದು, ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.

    ದೇವಿಯೇ ನೋಡಿಕೊಳ್ಳುತ್ತಾಳೆ: ಘಟನೆ ಬಗ್ಗೆ ಮಾತನಾಡಿದ ವೆಂಕಟೇಶ ನಾಯ್ಕ, ನಮ್ಮ ದೇವಸ್ಥಾನದ ಅಭಿವೃದ್ಧಿ ಸಹಿಸದ ಯಾರೋ ಕಿಡಿಗೇಡಿಗಳು ಈ ಕೃತ್ಯ ಮಾಡಿದ್ದಾರೆ. ಅದ್ಯಾವುದರ ಬಗ್ಗೆಯೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಮಾರಿಕಾಂಬಾ ದೇವಿಯ ಮೇಲೆ ನಂಬಿಕೆ ಇದೆ. ರಾಜ್ಯ ಸೇರಿದಂತೆ ದೇಶ-ವಿದೇಶದಲ್ಲಿ ದೇವಿಗೆ ಕೋಟ್ಯಾಂತರ ಭಕ್ತರಿದ್ದಾರೆ. ಎಲ್ಲರಿಗೂ ದೇವಿಯ ಮೇಲೆ ಅಪರವಾದ ಭಕ್ತಿ ನಂಬಿಕೆ ಇದೆ. ಈ ಕೃತ್ಯ ಮಾಡಿದವರನ್ನು ದೇವಿ ನೋಡಿಕೊಳ್ಳುತ್ತಾಳೆ ಎನ್ನುವ ನಂಬಿಕೆ ಇದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts