More

    ಮಾರ್ಗಸೂಚಿ ಪಾಲನೆ ಕಡ್ಡಾಯ – ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ

    ಬೆಳಗಾವಿ: ಕೋವಿಡ್-19 ಸೋಂಕಿತರ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಸೋಂಕು ನಿಯಂತ್ರಣಕ್ಕಾಗಿ ಮೇ 12ರ ಬೆಳಗ್ಗೆ 6 ಗಂಟೆಯವರೆಗೆ ಜನತಾ ಕರ್ಯ್ೂ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ ತಿಳಿಸಿದ್ದಾರೆ.

    ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವಿಕೆ ತಡೆಗಟ್ಟಲು ಮಾರ್ಗಸೂಚಿಗಳನ್ನು ಸಾರ್ವಜನಿಕರು, ವಿವಿಧ ಇಲಾಖೆಗಳ ಮುಖ್ಯಸ್ಥರು, ಖಾಸಗಿ ಸಂಘ-ಸಂಸ್ಥೆಗಳು, ಶಿಸ್ತುಬದ್ಧ ಹಾಗೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ. ಸೂಚನೆಗಳನ್ನು ಪಾಲಿಸದೇ ಇದ್ದಲ್ಲಿ ಅಥವಾ ಯಾವುದೇ ಕ್ರಮ ಅನುಷ್ಠಾನಗೊಳಿಸದಿದ್ದಲ್ಲಿ ಅವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮದಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts