More

    ಮಿನಿವಿಧಾನಸೌಧ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

    ಲಕ್ಷ್ಮೇಶ್ವರ: ಪಟ್ಟಣದಲ್ಲಿ ಮಿನಿ ವಿಧಾನಸೌಧ ನಿರ್ವಿುಸುವ ಸಲುವಾಗಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದರು.

    ಈ ವೇಳೆ ತಹಸೀಲ್ದಾರ್ ಭ್ರಮರಾಂಬ ಗುಬ್ಬಿಶೆಟ್ಟಿ ಅವರು ಜಿಲ್ಲಾಧಿಕಾರಿಗೆ ದೊಡ್ಡೂರ ರಸ್ತೆಯಲ್ಲಿರುವ ಕಂದಾಯ ಇಲಾಖೆಗೆ ಸೇರಿದ ಸರ್ವೆ ನಂ. 13/ಕ ದಲ್ಲಿನ 3 ಎಕರೆ 29 ಗುಂಟೆ ನಿವೇಶನ ತೋರಿಸಿದರು. ಈ ಸ್ಥಳ ಪಟ್ಟಣ ಸೇರಿ ತಾಲೂಕಿನ ಎಲ್ಲ ಗ್ರಾಮಗಳ ಜನರಿಗೆ ಅನುಕೂಲಕರವಾಗಿದೆ. ಈ ನಿವೇಶನದಲ್ಲಿ ಈ ಹಿಂದೆ ಪುರಸಭೆಗೆ ಕಸ ವಿಲೇವಾರಿ ಮಾಡಲು ಅವಕಾಶ ನೀಡಲಾಗಿತ್ತು. ಈಗ ಪುರಸಭೆಯವರು ಗದಗ ರಸ್ತೆಯಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ವಿುಸಿಕೊಂಡಿದ್ದಾರೆ. ಆದ್ದರಿಂದ ಈ ನಿವೇಶನ ಹಸ್ತಾಂತರಿಸುವಂತೆ ಪುರಸಭೆ ಮುಖ್ಯಾಧಿಕಾರಿಗೆ ತಿಳಿಸಲಾಗಿದೆ ಎಂದರು.

    ಸ್ಥಳ ಪರಿಶೀಲಿಸಿದ ಮಾತನಾಡಿದ ಜಿಲ್ಲಾಧಿಕಾರಿ, ಮಿನಿವಿಧಾನಸೌಧ ನಿರ್ವಣಕ್ಕೆ ಈ ಸ್ಥಳ ಸೂಕ್ತವಾಗಿದೆ. ಗಜೇಂದ್ರಗಡದಲ್ಲೂ ಸ್ಥಳ ಗುರುತಿಸಲಾಗಿದೆ. ಸರ್ಕಾರದ ಪ್ರಮುಖ 14 ಇಲಾಖೆಗಳು ಒಂದೇ ಸೂರಿನಡಿ ಕಾರ್ಯ ನಿರ್ವಹಿಸುವಂತಾಗಲು ಎರಡೂ ಕಡೆ ಒಂದೇ ರೀತಿಯಲ್ಲಿ ಮಿನಿವಿಧಾನಸೌಧ ನಿರ್ಮಾಣ ಮಾಡಲಾಗುವುದು. ಕೂಡಲೆ, ಕಂದಾಯ, ಕರ್ನಾಟಕ ಗೃಹ ನಿರ್ಮಾಣ ಮಂಡಳಿ, ಡಬ್ಲ್ಯುಡಿ, ಪುರಸಭೆಯ ಅಧಿಕಾರಿಗಳು ಸಂಬಂಧಪಟ್ಟ ಜಾಗದ ದಾಖಲೆಗಳನ್ನು, ಕ್ರಿಯಾಯೋಜನೆ ಸಿದ್ಧಪಡಿಸಿ ನೀಡಿದರೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದರು.

    ಬಳಿಕ ಹಿರೇಮಠ ಅವರು, ಮುಕ್ತಿ ಮಂದಿರ ರಸ್ತೆಯಲ್ಲಿ ನಿರ್ವಣಗೊಂಡಿರುವ ಜಲಾಗಾರ ವೀಕ್ಷಿಸಿ ಆದಷ್ಟು ಬೇಗ ನೀರು ಸರಬರಾಜಿಗೆ ಕ್ರಮ ಕೈಗೊಳ್ಳಬೇಕು. ಕರೊನಾ ಹಿನ್ನೆಲೆಯಲ್ಲಿ ತಾಲೂಕಾಡಳಿತ, ಪುರಸಭೆ, ಪೊಲೀಸ್ ಇಲಾಖೆಯವರು ಇನ್ನಷ್ಟು ಆಸಕ್ತಿ, ಮುತುವರ್ಜಿವಹಿಸಿ ಕಾರ್ಯ ನಿರ್ವಹಿಸಬೇಕು ಎಂದರು.

    ಜಿ.ಎಸ್. ಗಡ್ಡದೇವರಮಠ, ಉಪತಹಸೀಲ್ದಾರ್ ಎಂ.ಜಿ. ದಾಸಪ್ಪನವರ, ಮುಖ್ಯಾಧಿಕಾರಿ ಆರ್.ಎಂ. ಪಾಟೀಲ, ಎಂ.ಎಸ್. ದೊಡ್ಡಗೌಡರ, ಚನ್ನಪ್ಪ ಜಗಲಿ, ಕೆಎಚ್​ಬಿಯ ಇಂಜಿನಿಯರ್ ವಿನಾಯಕ ಜೋಶಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts