More

    ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಉಳಿಸಬೇಕು


    ಕೊಪ್ಪಳ: ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಬಿಟ್ಟು ಹೋಗುವುದೇ ಮನುಕುಲಕ್ಕೆ ನಾವು ಮಾಡುವ ಮಹತ್ವದ ಉಪಕಾರ. ಇದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.
    ತಾಲೂಕಿನ ಗಿಣಿಗೇರಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದರು. ನಮ್ಮ ಸುತ್ತಲ ಪರಿಸರ, ಕೆರೆ, ನೀರಿನ ಮೂಲಗಳನ್ನು ಜೋಪಾನವಾಗಿ ಕಾಪಾಡುವುದು ನಮ್ಮ ಕರ್ತವ್ಯ. ಅದನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಬೇಕು. ಕೆರೆ ಅಭಿವೃದ್ಧಿಗೆ ವಿವಿಧ ಇಲಾಖೆ ಅಧಿಕಾರಿಗಳು, ಸಂಘ, ಸಂಸ್ಥೆ, ನಾಗರಿಕರು, ಮಹಿಳೆಯರು, ಯುವಕರು ಕೈಜೋಡಿಸಿದ್ದಾರೆ. ಎಲ್ಲರೂ ತಮ್ಮ ಶ್ರಮದಾನ ಮಾಡುತ್ತಿರುವುದು ಸಂತಸದ ವಿಷಯ ಎಂದರು. ಗಿಣಿಗೇರಿ ಗ್ರಾಮದ ವಿವಿಧ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿ, ಸಿಬ್ಬಂದಿ 3,82,212ರೂ.ನ್ನು ಕೆರೆ ಅಭಿವೃದ್ಧಿಗೆ ದೇಣಿಗೆ ನೀಡಿದರು.
    =======

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts