More

    ಮೂಲಭೂತ ಸೌಲಭ್ಯ ಕಲ್ಪಿಸಲು ಆಗ್ರಹ

    ಕೆಂಭಾವಿ : ಪಟ್ಟಣದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸುವಂತೆ ನ್ಯಾಯವಾದಿ ಗುರುರಾಜ ತಿಳಗೂಳ ನೇತೃತ್ವದಲ್ಲಿ ನಾಗರಿಕರು ಒತ್ತಾಯಿಸಿದ್ದಾರೆ.

    ಈ ಕುರಿತು ಗುರುವಾರ ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಉಪತಹಸೀಲ್ದಾರ್‌ಗೆ ಸಲ್ಲಿಸಿ ಮಾತನಾಡಿದ ಆರೀಫ್ ಸಾಸನೂರ, ಪಟ್ಟಣ ಪುರಸಭೆಯಾಗಿ ಹಲವು ವರ್ಷ ಕಳೆದರೂ ಈವರೆಗೆ ಮೂಲಸೌಲಭ್ಯ ಇನ್ನೂ ಕಲ್ಪಿಸಿಲ್ಲ. ವಿಶೇಷ ತಹಸೀಲ್ದಾರ್ ನೇಮಕ ಮಾಡಬೇಕು. ಪಟ್ಟಣದ ಪೊಲೀಸ್ ಠಾಣೆ ಮೇಲ್ದರ್ಜೆಗೇರಿಸಬೇಕು. ಉಪ ನೋಂದಣಾಧಿಕಾರಿಗಳ ಕಚೇರಿ ಸ್ಥಾಪಿಸಬೇಕು. ಪುರಸಭೆಗೆ ಕಾಯಂ ಮುಖ್ಯಾಧಿಕಾರಿ ನೇಮಕ ಮಾಡಬೇಕು. ಅಂಚೆ ಇಲಾಖೆಗೆ ಸ್ವಂತ ಕಟ್ಟಡ ಒದಗಸಿಬೇಕು ಎಂಬುದು ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಒತ್ತಾಯಿಸಿದರು.

    ಈ ಎಲ್ಲ ಬೇಡಿಕೆ ಈಡೇರದಿದ್ದರೆ ಮುಂಬರುವ ದಿನಗಳಲ್ಲಿ ಪಟ್ಟಣದ ನಾಗರಿಕರೊಂದಿಗೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.

    ಬಂದೇನವಾಜ್ ನಾಲತವಾಡ, ಶಫೀಕ್ ದಫೇದಾರ್, ಲಕ್ಷö್ಮಣ ಬಸರಿಗಿಡ, ಸಿದ್ದಣ್ಣ ಮಾಳಳ್ಳಿಕರ್, ಶರಣಪ್ಪ ವಡ್ಡರ್, ರಂಗಪ್ಪ ಕಂದೀಲ್, ಮಹೆಬೂಬ್ ಆಂದೇಲಿ, ಸುರೇಶ, ಮಹೆಬೂಬ್ ಕಾಚೂರ, ರಫೀಕ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts