More

    ಮೇ 2 ರಂದು ಸಿಂಧನೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ

    ಸಿಂಧನೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 2 ರಂದು ಮಧ್ಯಾಹ್ನ 2.30ಕ್ಕೆ ನಗರದಲ್ಲಿ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಕಾರ್ಯಕ್ರಮದ ಉಸ್ತುವಾರಿ ರಾಜೇಶ ಹಿರೇಮಠ ತಿಳಿಸಿದರು.

    ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದರು. ಮೋದಿ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಿವಿಧ ಜಿಲ್ಲೆಗಳ 10 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ 5 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದೆ ಎಂದರು.


    ಇದನ್ನೂ ಓದಿ: 29ರಂದು ವಿಜಯಪುರಕ್ಕೆ ಪ್ರಧಾನಿ ನರೇಂದ್ರ ಮೋದಿ – ಬಸನಗೌಡ ಪಾಟೀಲ

    ಪ್ರಧಾನಿ ನರೇಂದ್ರ ಮೋದಿ ಚಿಂತನೆ ಸಾಕಾರಕ್ಕೆ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ

    ಬಿಜೆಪಿಯಲ್ಲಿ ಎಲ್ಲರೂ ಜತೆಗೆ ಇದ್ದೇವೆ

    ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಜಾತಿಯ ಹೆಸರಿನಲ್ಲಿ ರಾಜಕೀಯ ಮಾಡುವವರು ಜನರ ನಡುವೆ ಒಡಕುಂಟು ಮಾಡುತ್ತಾರೆ. ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಕೆಲವರು ಇಲ್ಲಸಲ್ಲದ ಆರೋಪ ಮಾಡುವುದು ಸಹಜ. ಬಿಜೆಪಿಯಲ್ಲಿ ಎಲ್ಲರೂ ಜತೆಗೆ ಇದ್ದೇವೆ. ವಿರೋಧ ಪಕ್ಷದವರು ಏನೇ ಗೊಂದಲ ಸೃಷ್ಟಿಸಿದರೂ ಫಲಿತಾಂಶದ ಬಳಿಕ ಎಲ್ಲವೂ ತಿಳಿಯಲಿದೆ ಎಂದರು.

    ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಶಂಕ್ರಪ್ಪ, ಕ್ಷೇತ್ರದ ಚುನಾವಣೆ ಉಸ್ತುವಾರಿ ನರಸಿಂಹರಾವ್ ಕುಲಕರ್ಣಿ, ಜಿಪಂ ಮಾಜಿ ಸದಸ್ಯ ಅಮರೇಗೌಡ ವಿರೂಪಾಪುರ, ಬಿಜೆಪಿ ಮಂಡಲ ಅಧ್ಯಕ್ಷರಾದ ಹನುಮೇಶ ಸಾಲಗುಂದ, ನಿರುಪಾದೆಪ್ಪ ಜೋಳದರಾಶಿ, ಪುರಸಭೆ ಮಾಜಿ ಅಧ್ಯಕ್ಷ ಕೆ.ಮರಿಯಪ್ಪ, ಶಿವಬಸನಗೌಡ ಗೊರೇಬಾಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts