More

    ಮೊಬೈಲ್​ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಬೆಳಗಾವಿ: ಕೆನರಾ ಬ್ಯಾಂಕ್​ ದೇಶಪಾಂಡೆ ಆರ್​ ಸೆಟ್​ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ತರಬೇತಿ ಸಂಸ್ಥೆಯಲ್ಲಿ 18 ರಿಂದ 45 ವಯಸ್ಸಿನ ಗ್ರಾಮೀಣ ನಿರುದ್ಯೋಗಿ ಯುವಕ/ಯುವತಿಯರಿಗೆ 30 ದಿನಗಳ ಮೊಬೈಲ್​ ದುರಸ್ತಿ ಮತ್ತು ಕೃಷಿ ಜತೆಗೆ 10 ದಿನಗಳ ಲಾಭದಾಯಕ ತರಕಾರಿ ಬೆಳೆ ಹಾಗೂ ನರ್ಸರಿ ಮಾಡುವುದರ ಬಗ್ಗೆ ಸೆಪ್ಟೆಂಬರ್​ ತಿಂಗಳಿನಲ್ಲಿ ಉಚಿತ ತರಬೇತಿ ನೀಡಲಾಗಿದ್ದು, ಸೆಪ್ಟೆಂಬರ್​ 5ರೊಳಗೆ ಅರ್ಜಿ ಸಲ್ಲಿಸಬಹುದು.

    ತರಬೇತಿಯು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ, ಸಾಫ್ಟ್​ಸ್ಕಿಲ್ಸ್​, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್​, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಬಗೆಗಿನ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು. ಆಸಕ್ತರು ಮೊ: 9482188780 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts