More

    ಮೊಬೈಲ್ ಆಪ್ ಬೆಳೆ ಸಮೀಕ್ಷೆಗೆ ಚಾಲನೆ

    ಹಳಿಯಾಳ: ರೈತರಿಗೆ ಸಹಾಯಕವಾಗುವ ವಿವಿಧ ಯೋಜನೆಗಳ ಸಹಾಯಧನ, ಪರಿಹಾರ, ಬೆಂಬಲ ಬೆಲೆ ಹಾಗೂ ಬೆಳೆ ಸಾಲ ನೀಡಲು ಅನುಕೂಲವಾಗುವ ದಿಸೆಯಲ್ಲಿ ರೈತರಿಂದ ಬೆಳೆಯ ಬಗ್ಗೆ ಮಾಹಿತಿ ಸಂಗ್ರಹಿಸಲು ಆರಂಭಿಸಿರುವ ಬೆಳೆ ಸಮೀಕ್ಷೆ ಆಪ್ ಯೋಜನೆಯಲ್ಲಿ ರೈತರು ಸಕ್ರಿಯರಾಗಿ ಭಾಗವಹಿಸಬೇಕು ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.

    ಮಿನಿವಿಧಾನಸೌಧದ ಆವರಣದಲ್ಲಿ ತಾಲೂಕು ಕೃಷಿ ಇಲಾಖೆ ಸೋಮವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮೊಬೈಲ್ ಆಪ್ ಬೆಳೆ ಸಮೀಕ್ಷೆ ಹಾಗೂ ರೈತರಿಗೆ ಮಾಹಿತಿ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

    ವಿ.ಪ. ಸದಸ್ಯ ಎಸ್.ಎಲ್. ಘೊಟ್ನೇಕರ, ಜಿ.ಪಂ. ಉಪಾಧ್ಯಕ್ಷ ಸಂತೋಷ ರೇಣಕೆ, ಸದಸ್ಯರಾದ ಕೃಷ್ಣ ಪಾಟೀಲ, ಲಕ್ಷ್ಮೀ ಕೊರ್ವೆಕರ, ಮಹೇಶ್ವರಿ ಮಿಶಾಳೆ, ತಾ.ಪಂ. ಅಧ್ಯಕ್ಷೆ ರೀಟಾ ಸಿದ್ದಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಭಾಸ್ ಕೊರ್ವೆಕರ, ಶಂಕರ ಕಾಜಗಾರ, ಅಶೋಕ ಮೇಟಿ, ಎಂ.ವಿ. ಘಾಡಿ, ಎಸ್.ಜಿ. ಮಾನೆ, ತಹಸೀಲ್ದಾರ್ ವಿದ್ಯಾಧರ ಗುಳಗುಳೆ, ಸಹಾಯಕ ಕೃಷಿ ನಿರ್ದೇಶಕ ಪಿ.ಐ. ಮಾನೆ, ತಾ.ಪಂ. ನರೇಗಾ ಸಹಾಯಕ ನಿರ್ದೇಶಕ ಪರಶುರಾಮ ಗಸ್ತಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts