More

    ಮೋದಿ ಎದುರು ಕಾಂಗ್ರೆಸ್ ಗ್ಯಾರಂಟಿ ನಡೆದಿಲ್ಲ

    ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಂಸದ ಪಿ.ಸಿ.ಗದ್ದಿಗೌಡರ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುವುದು ನಿಶ್ಚಿತ. ಮತದಾರರು ಮೋದಿ ಗ್ಯಾರಂಟಿ ನಂಬಿದ್ದಾರೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ವಿಶ್ವಾಸ ವ್ಯಕ್ತಪಡಿಸಿದರು.

    ನಗರದ ಬಿವಿವಿ ಸಂಘದ ಮಿನಿ ಸಭಾಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈ ಸಾರಿ ಚುನಾವಣೆಯಲ್ಲಿ ಜಾತಿ ಸಮೀಕರಣ ಮಾಡಿದರು ಸಹ ನಮ್ಮ ಜಿಲ್ಲೆಯಲ್ಲಿ ವರ್ಕೌಟ ಆಗಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಗ್ಯಾರಂಟಿ ವೇಗದಲ್ಲಿ ಕಾಂಗ್ರೆಸ್ ಗ್ಯಾರಂಟಿ ಆಟ ನಡೆಯಲಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಜನ ನಂಬಿ ಮತ ಹಾಕಿದ್ದರು.

    ಆದರೇ ಒಂದು ವರ್ಷದಲ್ಲಿ ಅದರ ಮರ್ಮ ಅರಿತು ಲೋಕಸಭೆ ಚುನಾವಣೆಗೆ ಮೋದಿಗೆ ಗ್ಯಾರಂಟಿಗೆ ಜನ ಉತ್ತಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಕಳೆದ ಚುನಾವಣೆಗ್ಗಿಂತ ಈ ಸಾರಿ ಗದ್ದಿಗೌಡರ ಅತೀ ಹೆಚ್ಚು ಮತಗಳ ಅಂತರದಿಂದ ಗೆಲವು ಸಾಽಸಲಿದ್ದಾರೆ ಎಂದರು.

    ಕ್ಷೇತ್ರದಲ್ಲಿ ಉಳಿ ಬಿಸಿಲಿನಲ್ಲಿಯೂ ಮತದಾರರು ವಯೋ ವೃದ್ಧರು, ಅಂಗವಿಕಲರು, ಯುವಕರು, ಯುವತಿಯರು ತಮ್ಮ ಮತದಾನದ ಹಕ್ಕನ್ನು ಮತಗಟ್ಟೆಗೆ ಬಂದು ಚಲಾಯಿಸಿದ್ದಾರೆ. ಇದು ಖುಷಿ ನೀಡಿತು. ಕಾರ್ಯಕರ್ತರು, ಪದಾಽಕಾರಿಗಳು, ಮುಖಂಡರು ಅವಿರತವಾಗಿ ಶ್ರಮಿಸಿದ್ದಾರೆ. ಇದರಿಂದ ಬಿಜೆಪಿ ಗೆಲುವು ನಿಶ್ಚಿತ ಎಂದು ಹರ್ಷ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts