ಭದ್ರಾವತಿ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ ಅಂಗವಾಗಿ ಹೊಸಮನೆ ವೀರಭದ್ರೇಶ್ವರ ದೇವಾಲಯದಲ್ಲಿ ತಾಲೂಕು ಬಿಜೆಪಿ ಘಟಕ ವಿಶೇಷ ಪೂಜೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಡಿತ್ತು. ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಜಿ.ಧರ್ಮಪ್ರಸಾದ್ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ನರೇಂದ್ರ ಮೋದಿ ಅವರ ಏಳಿಗೆಗಾಗಿ ವೀರಭದ್ರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.