More

    ಮೋದಿ ವಿಶ್ವ ಕಂಡ ಅಪರೂಪದ ನಾಯಕ

    ಯಾದಗಿರಿ: ವೀರಶೈವ ಸಮಾಜಕ್ಕೆ ಅನ್ಯಾಯ ಮಾಡಿದ ಕಾಂಗ್ರೆಸ್ನ್ನು ಜನತೆ ಈ ಬಾರಿ ಯಾವುದೇ ಕಾರಣಕ್ಕೂ ಅಕಾರಕ್ಕೆ ತರದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದರು.
    ಸುರಪುರ ತಾಲೂಕಿನ ಹುಣಸಗಿ ಪಟ್ಟಣದಲ್ಲಿ ಶನಿವಾರ ಬಿಜೆಪಿ ಅಭ್ಯಥರ್ಿ ನರಸಿಂಹ ನಾಯಕ (ರಾಜುಗೌಡ) ಪರ ಭರ್ಜರಿ ರೋಡ್ ಶೋ ನಡೆಸಿ, ನೆರೆದಿದ್ದ ಬೃಹತ್ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಅವರು, ಹಿಂದೆ ಮುಖ್ಯಮಂತ್ರಿಯಾಗಿದ್ದ ವೀರೇಂದ್ರ ಪಾಟೀಲ್ರನ್ನು ರಾಜೀವ್ ಗಾಂ ಅವರು ವಿಮಾನ ನಿಲ್ದಾಣದಲ್ಲಿ ನಿಂತು ರಾಜಿನಾಮೆ ಪಡೆದುಕೊಂಡರು. ಆ ಸಂದರ್ಭದಲ್ಲಿ ನಾನು ಪಾಟೀಲ್ರ ಮನೆಗೆ ಹೋಗಿ ಸಂತೈಸಿದ್ದೆ ಎಂದು ಹಿಂದಿನ ಇತಿಹಾಸ ಮೆಲುಕು ಹಾಕಿದರು.
    ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಿದ್ದ ದೊಡ್ಡ ದೊಡ್ಡ ನಾಯಕರನ್ನು ಕಣ್ಣೀರು ಹಾಕಿಸಿದ ಪ್ರತಿಫಲವಾಗಿ ಇಂದು ದೇಶದಲ್ಲಿ ಸಂಪೂರ್ಣ ಮುಳುಗುವ ಹಡಗಾಗಿದೆ. ಕಾಂಗ್ರೆಸ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಹಾಗೂ ಗೃಹ ಸಚಿವ ಅಮಿತ್ ಷಾ ಸರಿಸಮನಾಗಿ ನಿಲ್ಲುವ ನಾಯಕರು ಯಾರಿದ್ದಾರೆ ಎಂದು ಪ್ರಶ್ನಿಸಿದ ಬಿಎಸ್ವೈ ನಾನು ಮುಖ್ಯಮಂತ್ರಿಯಾಗಿದ್ದಾಗ ಮಹಿಳಾ ಸಬಲೀಕರಣಕ್ಕಾಗಿ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದೆ. ರೈತಾಪಿ ವರ್ಗಕ್ಕೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ ಮಾಡಿದ್ದೇನೆ ಎಂದು ತಮ್ಮ ಅಕಾರ ಮಹತ್ವಾಕಾಂಕ್ಷಿ ಯೋಜನೆಗಳನ್ನು ಒಂದೊಂದಾಗಿ ಬಿಡಿಸಿಟ್ಟರು.
    ಪ್ರಧಾನಿ ನರೇಂದ್ರ ಮೋದಿ ವಿಶ್ವ ಕಂಡ ಅಪರೂಪದ ನಾಯಕ. ಅವರ ನಾಯಕತ್ವದಲ್ಲಿ ಇಂದು ಭಾರತ ಪ್ರಕಾಶಿಸುತ್ತಿದೆ. ನನಗೆ 81 ವರ್ಷ. ಈ ಇಳಿವಯಸ್ಸಿನಲ್ಲೂ ಪಕ್ಷವನ್ನು ಅಕಾರಕ್ಕೆ ತರಲು ನಾಡಿನಾದ್ಯಂತ ಪ್ರವಾಸ ಮಾಡುತ್ತಿದ್ದೇನೆ. ನಾನೆಂದು ಜಾತಿ, ಧರ್ಮದ ವಿಷಯದಲ್ಲಿ ತಾರತಮ್ಯ ಮಾಡಿಲ್ಲ. ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಕ್ಕೆ ಬಲ ತುಂಬಬೇಕು ಎಂದು ಮನವಿ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts