More

    ಯುವ ಪುರಸ್ಕಾರಕ್ಕೆ ಕವಿ ಆರಿಫ್‌ ರಾಜಾ ಆಯ್ಕೆ

    ಬಾಗಲಕೋಟೆ: ಕೋಲ್ಕತ್ತಾದ ಭಾರತೀಯ ಭಾಷಾ ಪರಿ ಷತ್‌ನ ಯುವ ಪುರಸ್ಕಾರಕ್ಕೆ ಕವಿ ಆರಿಫ್‌ ರಾಜಾ ಆಯ್ಕೆ ಆಗಿದ್ದಾರೆ. ಪ್ರಶಸ್ತಿಯು ಸ್ಮರಣಿಕೆ, ₹51 ಸಾವಿರ ನಗದು ಬಹುಮಾನ ಒಳಗೊಂಡಿದೆ.

    ಏಪ್ರಿಲ್ 20ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್ತಿನ ಅಧ್ಯಕ್ಷೆ ಕುಸುಮ್‌ ಖೇಮಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸೈತಾನನ ಪ್ರವಾದಿ, ಜಂಗಮ ಫಕೀರನ ಜೋಳಿಗೆ, ಬೆಂಕಿಗೆ ತೊಡಿಸಿದ ಬಟ್ಟೆ, ನಕ್ಷತ್ರ ಮೋಹ, ಎದೆ ಹಾಲಿನ ಪಾಳಿ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ. ಬೇಂದ್ರೆ ಪುಸ್ತಕ ಬಹುಮಾನ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅರಳು ಸಾಹಿತ್ಯ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ ಸೇರಿ ಹಲವು ಪ್ರಶಸ್ತಿಗಳಿಗೆ ಅವರು ಪಾತ್ರರಾಗಿದ್ದಾರೆ.

    ಇಳಕಲ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಆರಿಫ್‌ ಅವರ ಹಲವು ಕವಿತೆಗಳು ಇಂಗ್ಲಿಷ್, ಸ್ಪ್ಯಾನಿಷ್, ಪರ್ಷಿಯನ್, ಗ್ರೀಕ್, ಅಲ್ಬೇನಿಯನ್, ಟರ್ಕಿಷ್ ಸೇರಿ ದೇಶದ ತಮಿಳು, ತೆಲುಗು, ಮಲಯಾಳಂ, ಹಿಂದಿ ಅಲ್ಲದೇ ಹಲವು ಭಾಷೆಗಳಿಗೆ ಅನುವಾದಗೊಂಡಿವೆ.

    ಅವರ ಕವಿತೆಗಳು ದಾವಣಗೆರೆ, ಮಂಗಳೂರು, ಶಿವಮೊಗ್ಗ, ಮೈಸೂರು, ವಿಜಯಪುರದ ಅಕ್ಕಮಹಾದೇವಿ
    ವಿಶ್ವವಿದ್ಯಾಲಯ ಸೇರಿ ಕರ್ನಾಟಕ ಪಿಯು ಮಂಡಳಿಯ ಪ್ರಥಮ ಪಿಯುಸಿಗೆ ಪಠ್ಯವಾಗಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts