More

    ಯೋಧ ಹನುಮಂತರಾವ್ ಸಾರಥಿಗೆ ಅಂತಿಮ ವಿದಾಯ

    ಬೆಳಗಾವಿ: ವಿಮಾನ ದುರಂತದಲ್ಲಿ ಮೃತಪಟ್ಟ ಯೋಧ ಇಲ್ಲಿನ ಗಣೇಶಪುರ ನಿವಾಸಿ ಹನುಮಂತರಾವ್ ಸಾರಥಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಸಾಂಬ್ರಾ ವಿಮಾನ ನಿಲ್ದಾಣದಿಂದ ಯೋಧನ ಪಾರ್ಥಿವ ಶರೀರ ತರುವ ವೇಳೆ ಹಿಂಡಲಗಾದ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಿಂದ ಗಣೇಶಪುರದ ವರೆಗೆ ಸ್ಥಳೀಯರು ರಸ್ತೆ ಶುಚಿಗೊಳಿಸಿ, ರಂಗೋಲಿ ಬಿಡಿಸಿ ಅಗಲಿದ ಯೋಧನಿಗೆ ಗೌರವ ಸಲ್ಲಿಸಿದರು. ರಸ್ತೆಯುದ್ದಕ್ಕೂ ರಾಷ್ಟ್ರಭಕ್ತಿ ಗೀತೆಗಳು ಅನುರಣಿಸಿದವು. ವೀರ್ ಜವಾನ್ ಹನುಮಂತರಾವ್ ಅಮರ ರಹೇ ಘೋಷಣೆ ಕೂಗಿದರು. ಅದಕ್ಕೂ ಮೊದಲು ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಶಾಸಕ ಅನಿಲ ಬೆನಕೆ, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪೊಲೀಸ್ ಆಯುಕ್ತ ಡಾ. ಎಂ.ಬಿ.ಬೋರಲಿಂಗಯ್ಯ, ಜಿಪಂ ಸಿಇಒ ಎಚ್.ವಿ. ದರ್ಶನ, ಮತ್ತಿತರ ಗಣ್ಯರು ಪುಷ್ಪಗುಚ್ಛ ಸಮರ್ಪಿಸಿ ಅಂತಿಮ ನಮನ ಸಲ್ಲಿಸಿದರು.

    ಗಣ್ಯರಿಂದ ಶ್ರದ್ಧಾಂಜಲಿ: ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರ ನಿಧನಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಗೋವಿಂದ ಕಾರಜೋಳ ಸಂತಾಪ ಸೂಚಿಸಿದರು. ಚಿಕ್ಕ ವಯಸ್ಸಿನಲ್ಲೇ ಹುತಾತ್ಮರಾಗಿದ್ದು, ದುಃಖ ತಂದಿದೆ. ಅವರ ಕುಟುಂಬವೇ ದೇಶಸೇವೆಗೆ ಮುಡಿಪಾಗಿದೆ. ಅವರ ದುಃಖದಲ್ಲಿ ನಾವೂ ಭಾಗಿಯಾಗಿದ್ದೇವೆ. ಕುಟುಂಬಸ್ಥರಿಗೆ ದುಃಖ ತಡೆದುಕೊಳ್ಳುವ ಶಕ್ತಿ ದೇವರು ನೀಡಲಿ ಎಂದರು. ಜಿಲ್ಲಾಧಿಕಾರಿ ನಿತೇಶ ಪಾಟೀಲ ಸಂತಾಪ ಸೂಚಿಸಿದ್ದಾರೆ. ಹನುಮಂತರಾವ್ ಸಾರಥಿ ಅವರ ನಿಧನದ ಸುದ್ದಿ ತಿಳಿದು ತುಂಬ ದುಃಖವಾಯಿತು. ಹೆಮ್ಮೆಯ ಯೋಧ ಹನುಮಂತರಾವನನ್ನು ಕಳೆದುಕೊಂಡಿದ್ದು ದೇಶಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬದ ದುಃಖದಲ್ಲಿ ನಾನು ಕೂಡ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

    ಇಡೀ ಕುಟುಂಬವೇ ದೇಶಸೇವೆಗೆ ಸಮರ್ಪಣೆ

    ಹುತಾತ್ಮರಾದ ವೀರ ಯೋಧ ಹನುಮಂತರಾವ್ ಇಡೀ ಕುಟುಂಬವೇ ದೇಶ ಸೇವೆಗೆ ಸಮರ್ಪಣೆಯಾಗಿದೆ. ಪಾಕಿಸ್ತಾನ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ವೇಳೆ ಹನುಮಂತರಾವ್ ಅವರು ರಿಜರ್ವ್ ಟೀಮ್ನಲ್ಲಿದ್ದರು. ಯೋಧನ ತಂದೆ ರೇವಣಸಿದ್ದಪ್ಪ 32 ವರ್ಷ ಕಾಲ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಹಿರಿಯ ಸಹೋದರ ಪ್ರವೀಣ ಗ್ರೂಪ್ ಕ್ಯಾಪ್ಟನ್ ಆಗಿ ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರವೀಣ ಅವರ ಪತ್ನಿ ಏರ್‌ಫೋರ್ಸ್‌ನಲ್ಲಿ ಪೈಲೆಟ್ ಆಫೀಸರ್ ಆಗಿದ್ದಾರೆ. ಹುತಾತ್ಮ ಹನುಮಂತರಾವ್ ಪತ್ನಿ ಏರ್‌ಪೋರ್ಸ್‌ನಲ್ಲಿ ಅಕೌಂಟ್ ಆಫೀಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts