More

    ರಸ್ತೆಗಳ ದುರಸ್ತಿಗೆ ಆಗ್ರಹ

    ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಅವಳಿ ನಗರದ ರಸ್ತೆಗಳ ದುರಸ್ತಿಗೆ ಆಗ್ರಹಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಕೇಶ್ವಾಪುರದಲ್ಲಿಯ ಸಚಿವ ಜಗದೀಶ ಶೆಟ್ಟರ್ ನಿವಾಸದ ಬಳಿ ಬುಧವಾರ ರಸ್ತೆ ಹೊಂಡಗಳಲ್ಲಿ ಭತ್ತದ ನಾಟಿ ಮಾಡಿ ಪ್ರತಿಭಟಿಸಿದರು.

    ರಾಜ್ಯದ ಎರಡನೇ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹು-ಧಾ ಅವಳಿ ನಗರದ ರಸ್ತೆಗಳು ಸಂಪೂರ್ಣ ಹದಗೆಟ್ಟು, ಕೆಸರು ಗದ್ದೆಯಂತಾಗಿವೆ. ಇದರಿಂದ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಇಂತಹ ಹತ್ತಾರು ಸಮಸ್ಯೆಗಳಿದ್ದರೂ ಸಚಿವರು ಕೈಕಟ್ಟಿ ಕುಳಿತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆಯಿತು. ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ ಹಳ್ಳೂರ, ಕಾರ್ಯದರ್ಶಿ ರಜತ ಉಳ್ಳಾಗಡ್ಡಿಮಠ ಮತ್ತಿತರರು ನೇತೃತ್ವ ವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts