More

    ರಸ್ತೆ ಕಾಮಗಾರಿಗೆ ಭೂಮಿಪೂಜೆ

    ಬೈಲಕುಪ್ಪೆ: ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಮುತ್ತಿನ ಮುಳಸೋಗೆ ಗ್ರಾಮದಲ್ಲಿ 22 ಲಕ್ಷ ರೂ. ವೆಚ್ಚದ ಸಿ.ಸಿ.ರಸ್ತೆ ಕಾಮಗಾರಿಗೆ ಶುಕ್ರವಾರ ಶಾಸಕ ಕೆ.ಮಹದೇವ್ ಭೂಮಿಪೂಜೆ ನೆರವೇರಿಸಿದರು.

    ನಾನು ಈ ತಾಲೂಕಿನ ಪ್ರತಿಯೊಂದು ಹಳ್ಳಿಗೂ ಸಾಕಷ್ಟು ಸೌಲಭ್ಯವನ್ನು ಕಲ್ಪಿಸಿದ್ದೇನೆ. ನಮ್ಮ ಸರ್ಕಾರ ಇಲ್ಲದಿದ್ದರೂ ಬಿಜೆಪಿ ಸರ್ಕಾರದಿಂದ ಅನುದಾನ ತಂದು ಪ್ರತಿಯೊಂದು ಹಳ್ಳಿಗೂ ರಸ್ತೆ, ಡ್ರೈನೇಜ್, ಕುಡಿಯುವ ನೀರು, ವಿದ್ಯುತ್, ಶಾಲಾ ಕೊಠಡಿ ಸೇರಿದಂತೆ ಹಲವು ಅಭಿವೃದ್ಧಿ ಕೆಲಸ ಮಾಡಿಸಿದ್ದೇನೆ ಎಂದರು.

    ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ರೇಣುಕಸ್ವಾಮಿ, ಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯರಾದ ಸಲೀಂ. ಕೆ.ಕೆ.ನಾರಾಯಣ, ಮುಖಂಡರಾದ ಚಂದ್ರಶೇಖರ್, ಮಲ್ಲಿಕಾರ್ಜುನ ರವಿ, ಶಫಿವುಲ್ಲಾ ಖಾನ್. ಸೋಮಶೇಖರ್. ಪರಶಿವಮೂರ್ತಿ, ಪುಟ್ಟಿ, ಆವರ್ತಿ ಗ್ರಾ.ಪಂ. ಸದಸ್ಯ ಮಂಜು, ಪಿಡಿಒ ಅಭಿ ಮೊಹಮ್ಮದ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts