ಭಟ್ಕಳ: ಮಂಡ್ಯದ ಶ್ರೀ ಆದಿಚುಂಚನಗಿರಿ ಪ್ರೌಢಶಾಲೆಯಲ್ಲಿ 14 ಮತ್ತು 15ರಂದು ಜರುಗಿದ ರಾಜ್ಯಮಟ್ಟದ ಇನ್ಸ್ಪೈರ್ಅವಾರ್ಡ್ ಸ್ಪರ್ಧೆಯಲ್ಲಿ ತಾಲೂಕಿನ ಮುರ್ಡೆಶ್ವರದ ಬೀನಾ ವೈದ್ಯ ಶಾಲೆಯ ವಿದ್ಯಾರ್ಥಿ ಹೃಷಿಕೇಶ ಪತಿಹಾರ ತಯಾರಿಸಿದ ಅಗ್ರೀ ರೋಬೋ ಮಾದರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ನಿಸರ್ಗದ ಸೌರಶಕ್ತಿಯನ್ನು ಬಳಸಿಕೊಂಡು ರಿಮೋಟ್ ಮೂಲಕ ಈ ರೋಬೋ ಕಾರ್ಯನಿರ್ವಹಿಸುತ್ತದೆ. ಇದನ್ನು ಅತಿ ಕಡಿಮೆ ಖರ್ಚಿನಲ್ಲಿ ತಯಾರಿಸಬಹುದಾಗಿದೆ. ರೋಬೋ ಹೊಲವನ್ನು ಉಳುವ, ನೀರು ಹಾಯಿಸುವ ಹಾಗೂ ಬೀಜ ಬಿತ್ತುವ ಕೆಲಸವನ್ನು ಒಟ್ಟಿಗೆ ನಿರ್ವಹಿಸುವ ಮೂಲಕ ರೈತರ ಸಮಯ ಉಳಿಸುತ್ತದೆ.