More

    ರೈತರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ

    ಪಾಂಡವಪುರ: ತಾಲೂಕಿನ ಕಡಬ ಸಮೀಪದ ದೇವೇಗೌಡನಕೊಪ್ಪಲು ಗ್ರಾಮದ ಬಳಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮೂರು ವರ್ಷದ ಗಂಡು ಚಿರತೆ ಗುರುವಾರ ರಾತ್ರಿ ಬಿದ್ದಿದೆ.


    ಗ್ರಾಮದ ಸುತ್ತಮುತ್ತ ಸಂಚರಿಸುತ್ತಿದ್ದ ಚಿರತೆ ಹಸು, ಕುರಿ, ಕೋಳಿ, ಮೇಕೆ ಹಾಗೂ ನಾಯಿಗಳ ಮೇಲೆ ದಾಳಿ ನಡೆಸಿ ಹೊತ್ತೊಯ್ಯುವ ಮೂಲಕ ರೈತರಲ್ಲಿ ಆತಂಕ ಸೃಷ್ಟಿಸಿತ್ತು. ರೈತರು ರಾತ್ರಿ ವೇಳೆ ಮನೆಯಿಂದ ಹೊರಬರಲು ಹೆದರುತ್ತಿದ್ದರು. ಚಿರತೆ ಸೆರೆ ಹಿಡಿದು ಅದರ ಕಾಟ ತಪ್ಪಿಸುವಂತೆ ರೈತರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಚಿರತೆಯ ಚಲನವಲನ ಆಧರಿಸಿ ಬೋನಿನಲ್ಲಿ ನಾಯಿ ಕಟ್ಟಿಹಾಕಿ ಚಿರತೆ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.


    ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ, ವಲಯ ಉಪ ಅರಣ್ಯಾಧಿಕಾರಿ ಶಿವಸಿದ್ದು, ಲವಕುಮಾರ್, ಧನಂಜಯ, ಕುಮಾರ್, ಮಹದೇವು, ಡ್ರೈವರ್ ಮಂಜು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts