More

    ರೈತರಿಗೆ ತೊಂದರೆಯಾಗದಂತೆ ಕೆಲಸ ಮಾಡಿ

    ಹುಣಸಗಿ: ತಹಸಿಲ್ ಕಚೇರಿಯಿಂದ ರೈತರಿಗೆ ನೀಡುವ ದಾಖಲಾತಿಯಲ್ಲಿ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಸಬೇಕು ಎಂದು ಶಾಸಕ ನರಸಿಂಹ ನಾಯಕ ಹೇಳಿದರು.

    ಗುರುವಾರ ತಹಸಿಲ್ ಕಚೇರಿಗೆ ದಿಢೀರ್ ಭೇಟಿ ನೀಡಿ ಕಚೇರಿಯಲ್ಲಿನ ದಾಖಲಾತಿಯನ್ನು ಪರಿಶೀಲಿಸಿ ಮಾತನಾಡಿದ ಅವರು, ಶಾಲಾ ಮಕ್ಕಳು, ರೈತರು, ಮಾಶಾಸನ, ಪಿಂಚಣಿ ಸೇರಿ ವಿವಿಧ ದಾಖಲಾತಿ ಪಡೆಯುವಲ್ಲಿ ವಿಳಂಬವಾಗುತ್ತಿರುವ ದೂರು ನನ್ನ ಬಳಿ ಬಂದಿವೆ. ಹೀಗಾಗಿ ನಾನು ತಹಸಿಲ್ಗೆ ಭೇಟಿ ನೀಡಬೇಕಾದ ಅನಿವಾರ್ಯವಾಗಿದೆ. ಇನ್ಮುಂದೆ ಯಾವುದೇ ದೂರು ನನ್ನ ಬಳಿ ಬರದಂತೆ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.

    ನಂತರ ಪಹಣಿ ವಿತರಣಾ ಕೋಣೆಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿ, ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮಾತನಾಡುವುದಾಗಿ ಸ್ಥಳದಲ್ಲಿದ್ದ ತಹಸೀಲ್ದಾರ್ಗೆ ಸೂಚನೆ ನೀಡಿದರು.
    ತಹಸೀಲ್ದಾರ್ ಜಗದೀಶ ಚೌರ್ ಮಾತನಾಡಿ, ಕಚೇರಿಯಲ್ಲಿ ವಿದ್ಯುತ್ ಸಮಸ್ಯೆ, ಜನರೇಟರ್, ಪ್ರಿಂಟರ್ ಸೇರಿ ವಿವಿಧ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಸಚಿವರ ಗಮನಕ್ಕೆ ತಂದರು. ಈ ಸಮಸ್ಯೆ ಶೀಘ್ರ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

    ಸಿಪಿಐ ಎಂ.ಬಿ.ಚಿಕ್ಕಣ್ಣನವರ್ ಹಾಗೂ ಸಿಬ್ಬಂದಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts