More

    ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ

    ಚಿತ್ರದುರ್ಗ: ಕೇಂದ್ರ ಸರ್ಕಾರ ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸದಸ್ಯ ರು ನಗರದ ವೀರ ವನಿತೆ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಪ್ರತಿಭಟಿಸಿದರು.
    ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಸಾಮಾಜಿಕ ಚಿಂತಕ ಪ್ರೊ.ಜೆ.ಯಾದವರೆಡ್ಡಿ,ಪ್ರತಿಭಟನಾನಿರತ ರೈತರನ್ನು ಕೇಂದ್ರ ಸ ರ್ಕಾರ ಕ್ರಿಮಿನಲ್‌ಗಳಂತೆ ನೋಡುತ್ತಿರುವುದು ಸರಿಯಲ್ಲ. ಈ ಹಿಂದೆ ಹೊಸದಿಲ್ಲಿಯಲ್ಲಿ 13 ತಿಂಗಳು ನಡೆದಿದ್ದ ರೈತರ ಚಳವಳಿ ಧಮನ ಗೊಳಿಸುವಲ್ಲಿ ಸೋತು ಕೊನೆಗೆ ಮೂರು ಕರಾಳ ಕಾಯ್ದೆಗಳನ್ನು ಹಿಂಪಡೆದಿದೆ. ಈ ಚಳವಳಿ ವೇಳೆ ಏಳು ನೂರು ರೈತರು ಹುತಾತ್ಮ ರಾಗಿ ದ್ದಾರೆ.
    ಬೆಂಬಲ ಬೆಲೆಗೆ ಒತ್ತಾಯಿಸುತ್ತಿರುವ ರೈತರ ಕೇಳುತ್ತಿರುವ ಬೇಡಿಕೆ ನ್ಯಾಯಯುತವಾಗಿದೆ ಎನ್ನುವ ಜ್ಞಾನ ಆಳುವ ಸರ್ಕಾರಗಳಿಗೆ ಇಲ್ಲ ದಿರುವುದು ನೋವಿನ ಸಂಗತಿ. ಕಾರ್ಪೊರೇಟ್ ಕುಳಗಳ ಸಾಲ ಮನ್ನಾ ಮಾಡುವಾಗ ಆರ್ಥಿಕ ಹೊರೆಯಾಗುತ್ತದೆಂಬ ಅರಿವು ಕೇಂದ್ರಕ್ಕೆ ಇರಲಿಲ್ಲವೇ ಎಂದು ಪ್ರಶ್ನಿಸಿದರು.
    ಬೆಂಬಲ ಬೆಲೆಗೆ ಪ್ರತಿ ವರ್ಷ 2 ಲಕ್ಷ ಕೋಟಿ ರೂ.ಬೇಕಾಗುತ್ತದೆ. ಕೃಷಿ ಉಳಿಯ ಬೇಕಾದರೆ ಸರ್ಕಾರಗಳು ರೈತರ ಬೇಡಿಕೆಗಳನ್ನು ಈಡೇರಿಸಬೇಕು. ಪ್ರಧಾನಿ ನರೇಂದ್ರಮೋದಿ ಅವರು ಸಂವಿಧಾನ, ಪ್ರಜಾಪ್ರಭುತ್ವವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕರ್ನಾಟಕಕ್ಕೆ ಅನ್ಯಾಯವಾಗಿದೆ.
    ಭದ್ರಾಮೇಲ್ದಂಡೆ ಯೋಜನೆಗೆ 5300 ಕೋಟಿ ರೂ.ಕಾಯ್ದಿರಿಸಿರುವ ಕೇಂದ್ರ ಅನುದಾನ ಬಿಡುಗಡೆಗೆ ಆಸಕ್ತಿ ತೋರುತ್ತಿಲ್ಲ. ರಾಜ್ಯದ ಹಲವು ನೀರಾವರಿ ಯೋಜನೆಗಳಿಗೂ ದ್ರೋಹವೆಸಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಿಐಟಿಯು ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‌ಪೀರ್ ಮಾತನಾಡಿ,ಕೇಂದ್ರದ ನೀತಿಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು,ಜನಸಾಮಾನ್ಯರು ತತ್ತರಿಸುವಂತಾ ಗಿದೆ ಎಂದರು.
    ಶ್ರೀಮಂತರ ಮೇಲೆ ತೆರಿಗೆ ಹೆಚ್ಚಿಸಿ ಬಡವರಿಗೆ ನೆರವಾಗ ಬೇಕು. ಸಾರ್ವಜನಿಕ ಕೈಗಾರಿಕೆ ಹಾಗೂ ಸೇವೆಗಳನ್ನು ಬಲಪಡಿಸ ಬೇಕು. ಡಾ.ಸ್ವಾಮಿನಾಥನ್ ವರದಿಯಂತೆ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ರಚಿಸ ಬೇಕು. ಕೃಷಿ ಕಾರ್ಮಿಕರಿಗೆ ಸಮಗ್ರ ಕಲ್ಯಾಣ ಯೋಜ ನೆಗಳನ್ನು ರೂಪಿಸ ಬೇಕೆಂದು ಕೇಂದ್ರವನ್ನು ಒತ್ತಾಯಿಸಿದರು.
    ಎಐಟಿಯುಸಿ ಜಿಲ್ಲಾಧ್ಯಕ್ಷ ರವಿಕುಮಾರ್,ಕರ್ನಾಟಕ ಜನಶಕ್ತಿ ಸಂಘಟನೆಯ ಟಿ.ಶಫಿವುಲ್ಲಾ,ಟಿ.ಆರ್.ಉಮಾಪತಿ,ಅಬ್ದುಲ್ಲಾ,ರಾಘ ವೇಂದ್ರ, ಕರಿಯಪ್ಪ,ಎಚ್.ಮಂಜುನಾಥ,ಆಯಿಷಾ,ತ್ರಿವೇಣಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾ ನಿರತರು ಕೇಂದ್ರ ಹಾಗೂ ಪ್ರಧಾನಿ ವಿರುದ್ಧ ಘೋಷಣೆಗಳನ್ನು ಕೂಗಿದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts