More

    ರೈತಾಪಿ, ಕಾರ್ಮಿಕ ವರ್ಗದ ಅಭಿವೃದ್ಧಿಗೆ ಜೆಡಿಎಸ್ ಬೆಂಬಲಿಸಿ

    ಗುಂಡ್ಲುಪೇಟೆ: ರೈತಾಪಿ ಹಾಗೂ ಕಾರ್ಮಿಕ ವರ್ಗದ ಅಭಿವೃದ್ಧಿಗಾಗಿ ಜೆಡಿಎಸ್ ಬೆಂಬಲಿಸಿ ಎಂದು ಜೆಡಿಎಸ್ ಅಭ್ಯರ್ಥಿ ಕಡಬೂರು ಮಂಜುನಾಥ್ ಮನವಿ ಮಾಡಿದರು.

    ಶುಕ್ರವಾರ ತಾಲೂಕಿನ ಮೇಲುಕಾಮನಹಳ್ಳಿ, ಕಲಿಗೌಡನಹಳ್ಳಿ, ಮಗುವಿನಹಳ್ಳಿ, ಬಸವಾಪುರ, ಬೆಂಡರವಾಡಿ, ಪುತ್ತನಪುರ, ಹಂಗಳಪುರ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿದರು.

    ಸರ್ಕಾರದ ನಿರ್ಲಕ್ಷ್ಯದಿಂದ ರೈತಾಪಿ ಜನರು ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕಾಗಿ ಬೀದಿಗೆ ಬರುವಂತಾಗಿದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ ಮಾತ್ರ ರೈತರ ಹಿತ ಹಾಗೂ ಅಭಿವೃದ್ಧಿ ಸಾಧ್ಯವಾಗಲಿದೆ. ಕಾರ್ಮಿಕರಿಗೆ ಕೈತುಂಬ ಉದ್ಯೋಗ ದೊರಕುವುದರಿಂದ ವಲಸೆ ಹೋಗುವುದು ತಪ್ಪುತ್ತದೆ. ನಾನು ಶಾಸಕನಾಗಿ ಆಯ್ಕೆಯಾದರೆ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು.

    ಮುಖಂಡರಾದ ಕೆ.ಎಂ.ಗಂಗಾಧರ, ಬಾಚಹಳ್ಳಿ ಮಣಿ, ಶಿವಮೂರ್ತಿ, ಪ್ರದೀಪ್, ಮುತ್ತಣ್ಣ ಮುಂತಾದವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts