More

    ರೈತ ಸಂಘದಿಂದ ಪ್ರತಿಭಟನೆ

    ಮದ್ದೂರು: ತಾಲೂಕಿನ ಕೊಪ್ಪ ಗ್ರಾಮದಲ್ಲಿ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಯಿತು.

    ರೈತ ಸಂಘದ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿ, ಸರ್ಕಾರ ಟನ್ ಕಬ್ಬಿಗೆ 5400 ರೂ. ದರ ನಿಗದಿ ಮಾಡಬೇಕು. ಲೀಟರ್ ಹಾಲಿನ ದರವನ್ನು 50 ರೂ.ಗೆ ಹೆಚ್ಚಿಸಬೇಕು. ಭತ್ತ, ರಾಗಿ ಖರೀದಿ ಕೇಂದ್ರ ಆರಂಭಿಸಿ ಸ್ಥಳದಲ್ಲೇ ಹಣ ಪಾವತಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ರೈತ ಮುಖಂಡರಾದ ನವೀನ್, ಹುರಗಲವಾಡಿ ರಾಮಯ್ಯ, ಉಮೇಶ್, ಮೂಡ್ಯ ಚನ್ನೇಗೌಡ, ವೆಂಕಟೇಶ್, ರಮೇಶ್, ರಾಮೇಗೌಡ, ಲಿಂಗರಾಜು, ಚಂದ್ರು, ಜಗದೀಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts