ಗೌರಿಬಿದನೂರು: ನಗರದ ಎಪಿಎಂಸಿ ಬಳಿ ಬೆಂಗಳೂರು ಮುಖ್ಯ ರಸ್ತೆಯಿಂದ ಹಿಂದುಪುರ-ಚಿಕ್ಕಬಳ್ಳಪುರ ಮುಖ್ಯ ರಸ್ತೆ ತಲುಪಲು ಅನುಕೂಲವಾಗುವಂತೆ ನಿರ್ಮಿಸಲಾಗುತ್ತಿರುವ ವರ್ತುಲ ರಸ್ತೆ ರೈಲ್ವೆ ಮೇಲ್ಸೆತುವೆ ಕಾಮಗಾರಿಯನ್ನು ಸೋಮವಾರ ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಪರಿಶೀಲಿಸಿದರು.
ವರ್ತುಲ ರಸ್ತೆಯು ಬೆಂಗಳೂರು-ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ, ಈ ಸೇತುವೆ ನಿರ್ಮಾಣದಿಂದ ನಗರದಲ್ಲಿ ವಾಹನ ದಟ್ಟಣೆ ಕಡಿಮೆಯಾಗುವುದಲ್ಲದೆ ಸರಕು ಸಾಗಣೆ ವಾಹನಗಳು ವರ್ತುಲ ರಸ್ತೆ ಮೂಲಕ ಹಾದು ಹೋಗಲು ಸಹಕರಿಯಾಗುತ್ತದೆ ಎಂದರು.
ರಿಂಗ್ ರೋಡ್ಗೆ ನಕ್ಷೆ: ಅಂತರ ಜಿಲ್ಲೆಗಳ ಸಂಪರ್ಕಕ್ಕೆ ಸಹಕಾರಿಯಾಗಲು ನಗರದಲ್ಲಿ ರಿಂಗ್ರೋಡ್ ನಿರ್ಮಾಣಕ್ಕೆ ನೀಲಿನಕ್ಷೆ ತಯಾರಿಸಲಾಗಿದೆ, ಇದರಿಂದ ತುಮಕೂರು, ಚಿಕ್ಕಬಳ್ಳಾಪುರ ಸೇರಿ ನೆರೆಯ ಅಂಧ್ರದ ಜಿಲ್ಲೆಗಳಿಗೆ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಶಿವಶಂಕರರೆಡ್ಡಿ ಅಭಿಪ್ರಾಯಪಟ್ಟರು.ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಚ್.ಎನ್.ಪ್ರಕಾಶ್ ರೆಡ್ಡಿ ಹಾಜರಿದ್ದರು.