More

    ಲೋಕ ಅದಾಲತ್ ಫೆ.8ರಂದು

    ಗದಗ: ಫೆಬ್ರವರಿ 8, ಏಪ್ರಿಲ್ 11, ಜುಲೈ 11, ಸೆಪ್ಟೆಂಬರ್ 12 ಮತ್ತು ಡಿಸೆಂಬರ್ 12ರಂದು ರಾಷ್ಟ್ರೀಯ ಲೋಕ ಅದಾಲತ್ ಏರ್ಪಡಿಸಲಾಗಿದೆ. ಆ ಮೂಲಕ ವಿವಿಧ ಪ್ರಕರಣಗಳ ಇತ್ಯರ್ಥ ಹಾಗೂ ಕಡಿಮೆ ಖರ್ಚಿನಲ್ಲಿ ಶೀಘ್ರ ವಿಲೇವಾರಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಜಿ.ಎಸ್. ಸಂಗ್ರೇಶಿ ಹೇಳಿದರು.

    ನಗರದ ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಅದಾಲತ್ ಮೂಲಕ ಪಕ್ಷಗಾರರು ವ್ಯಾಜ್ಯವನ್ನು ಜನತಾ ನ್ಯಾಯಾಲಯದ ಮೂಲಕ ಇತ್ಯರ್ಥಗೊಳಿಸಿಕೊಳ್ಳಬಹುದಾಗಿದೆ. ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುವುದು ಎಂದರು.

    ನ್ಯಾಯಾಲಯದಲ್ಲಿ ದಾಖಲಾಗದಿರುವ ಪ್ರಕರಣಗಳನ್ನು ಸಹ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅದಾಲತ್​ನಲ್ಲಿ ಅವಕಾಶ ಕಲ್ಪಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಮರುಪಾವತಿಸಲಾಗುವುದು. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಗದಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರೋಣ, ಲಕ್ಷೆ್ಮೕಶ್ವರ, ನರಗುಂದ, ಮುಂಡರಗಿ ನ್ಯಾಯಾಲಯಗಳಲ್ಲಿರುವ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಎಂದರು.

    ಜಿಲ್ಲೆಯ ರೋಣ, ಲಕ್ಷೆ್ಮೕಶ್ವರ, ಮುಂಡರಗಿ, ನರಗುಂದ ನ್ಯಾಯಾಲಯಗಳಲ್ಲಿ ಚಾಲ್ತಿ ಇರುವ ಪ್ರಕರಣಗಳೆಂದು ಪರಿಗಣಿಸಿದ ವಿವಿಧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳಬಹುದು ಎಂದು ವಿವರಿಸಿದರು.

    ಅಪರ ಜಿಲ್ಲಾ ನ್ಯಾಯಾಧೀಶ ನರಸಿಂಹ ಎಂ.ವಿ, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ರೂಪಾ ಎಸ್. ನಾಯಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜಿ. ಸಲಗರೆ, 1ನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಧೀಶ ಪಿ.ಜಿ. ಚೆಲುವಮೂರ್ತಿ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಶ್ರೀನಿವಾಸ, ಅಪರ ಹಿರಿಯ ದಿವಾಣಿ ನ್ಯಾಯಾಧೀಶ ರಾಜಣ್ಣ ಸಂಕಣ್ಣವರ, ಕಿರಿಯ ವಿಭಾಗದ ನ್ಯಾಯಾಧೀಶರಾದ ಎ.ಎಂ. ಬಡಿಗೇರ, ಮಹಾದೇವಪ್ಪ ಎಚ್. ಶ್ರೀಕಾಂತ ರವೀಂದ್ರ, ಸಲ್ಮಾ ಎ.ಎಸ್., ಜಿಲ್ಲಾ ವಕೀಲರ ಸಂಘದ ಜಂಟಿ ಕಾರ್ಯದರ್ಶಿ ವೈ.ಡಿ. ತಳವಾರ ಉಪಸ್ಥಿತರಿದ್ದರು.

    2019ರ ಡಿಸೆಂಬರ್​ವರೆಗೆ 3,281 ಪ್ರಕರಣಗಳು ಇತ್ಯರ್ಥಗೊಂಡಿವೆ. ಈ ಪೈಕಿ 1,143 ಪ್ರಕರಣಗಳು ರಾಜಿ ಸಂಧಾನದ ಮೂಲಕ, 623 ವ್ಯಾಜ್ಯಪೂರ್ವ ಪ್ರಕರಣಗಳು ಇತ್ಯರ್ಥಗೊಂಡಿವೆ. ಪ್ರಕರಣಗಳ ಇತ್ಯರ್ಥದಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ 4ನೇ ಸ್ಥಾನದಲ್ಲಿದೆ.

    ಜಿ.ಎಸ್. ಸಂಗ್ರೇಶಿ, ನ್ಯಾಯಾಧೀಶ

    ಇತ್ಯರ್ಥಗೊಳ್ಳಬಹುದಾದ ಪ್ರಕರಣಗಳು

    ಮೋಟಾರು ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಅಸಲು ದಾವೆಗಳು , ಬ್ಯಾಂಕುಗಳಿಗೆ ಸಂಬಂಧಿಸಿದ ವಸೂಲಾತಿ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವೈವಾಹಿಕ ಹಾಗೂ ಜೀವನಾಂಶ ಪ್ರಕರಣಗಳು, ಕಾನೂನಿನನ್ವಯ ರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಕಾನೂನು ಪ್ರಕಾರ ರಾಜಿ ಆಗಬಹುದಾದ ಎಲ್ಲ ತರಹದ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಳಿಸಿಕೊಳ್ಳಬಹುದು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts