ಚಿತ್ರದುರ್ಗ: ನಗರದ ನರ್ಸಿಂಗ್, ಬಿ.ಎಡ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ ವಸತಿನಿಲಯ ಸಮಸ್ಯೆ ಬಗೆಹರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಮಂಗಳವಾರ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ನೂರಾರು ವಿದ್ಯಾರ್ಥಿಗಳು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅವರು, ಹಾಸ್ಟೆಲ್ ಸಮಸ್ಯೆ ಸಿಎಂ ಸಿದ್ದರಾಮಯ್ಯ ಗಮನಕ್ಕೆ ತಂದು, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರೊಂದಿಗೆ ಚರ್ಚಿಸಿ, ಪರಿಹರಿಸುವ ಭರವಸೆ ನೀಡಿದರು. ಎಸ್ಆರ್ಎಸ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ, ನಿರಂಜನಮೂರ್ತಿ ಇತರರಿದ್ದರು.