More

    ವಿಗ್ರಹಗಳ ವಿಸರ್ಜನೆಗಾಗಿ ಕಲ್ಯಾಣಿ ಸ್ವಚ್ಛತೆ

    ಚಿಕ್ಕಮಗಳೂರು: ನಗರ ಹಾಗೂ ಸುತ್ತಮುತ್ತಲ ಪ್ರದೇಶದ ಮನೆಗಳಲ್ಲಿ ಪ್ರತಿಷ್ಠಾಪಿಸುವ ಹಾಗೂ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ಬಸವನಹಳ್ಳಿ ಕೆರೆ ಕಲ್ಯಾಣಿಯನ್ನು ಗುರುವಾರ ನಗರಸಭೆಯಿಂದ ಸ್ವಚ್ಛಗೊಳಿಸಲಾಯಿತು. ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ಗೌರಿ-ಗಣೇಶ ಹಬ್ಬದ ಅಂಗವಾಗಿ ಆ.31ರಂದು ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಒಂದು, ಮೂರು ಮತ್ತು ಐದನೇ ದಿನದಂದು ಮನೆ ಮತ್ತು ಸಾರ್ವಜನಿಕ ಮೂರ್ತಿಗಳನ್ನು ವಿಸರ್ಜಿಸಲು ಬಸವನಹಳ್ಳಿ ಕೆರೆ ಆವರಣದ ಕಲ್ಯಾಣಿಯನ್ನು ಸಿದ್ಧಪಡಿಸಲಾಗುತ್ತಿದೆ ಎಂದರು.

    ನಗರಸಭೆಯಿಂದ ಗಣೇಶೋತ್ಸವ ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದೆ. ವಿದ್ಯುತ್, ಸ್ವಚ್ಛತೆ, ವಿಸರ್ಜನೆ, ಮೆರವಣಿಗೆಗೆ ಸೇರಿದಂತೆ ಪ್ರತ್ಯೇಕ ತಂಡ ರಚಿಸಿ ಅಧಿಕಾರಿ, ಸಿಬ್ಬಂದಿಯನ್ನು ನೇಮಿಸಲಾಗಿದೆ. ಪೊಲೀಸ್ ಇಲಾಖೆ ಸಹಕಾರದೊಂದಿಗೆ ಶಾಂತಿಯುತವಾಗಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

    ಕರೊನಾ ಕಾರಣದಿಂದ ಸರಳವಾಗಿ ಉತ್ಸವ ಆಚರಿಸಲಾಗುತ್ತಿತ್ತು. ಈ ಬಾರಿ ನಗರದ ಬಹುತೇಕ ಮನೆಗಳಲ್ಲಿ ಗಣಪತಿ ಪ್ರತಿಷ್ಠಾಪಿಸುತ್ತಿರುವುದು ಸೇರಿದಂತೆ ಸಾರ್ವಜನಿಕ ಗಣೇಶೋತ್ಸವಗಳನ್ನು ವಿಜೃಂಭಣೆಯಿಂದ ಆಚರಿಸಲು ಸಮಿತಿಗಳು ಮುಂದೆ ಬಂದಿವೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts