More

    ವಿಜಯ ಸಂಕಲ್ಪ ಯಾತ್ರೆಯಲ್ಲಿ ಜನಸ್ತೋಮ

     ಶೃಂಗೇರಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ಜನಸಾಮಾನ್ಯರ ಅಭಿವೃದ್ಧಿಗಾಗಿ ನಿರಂತರ ಶ್ರಮಿಸುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಗುರುವಾರ ಪಟ್ಟಣಕ್ಕೆ ಆಗಮಿಸಿದ ವಿಜಯಸಂಕಲ್ಪ ಯಾತ್ರೆಯ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡುವ ಡಿ.ಎನ್.ಜೀವರಾಜ್ ಅವರನ್ನು ಚುನಾವಣೆಯಲ್ಲಿ ಎಲ್ಲರೂ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

    ಮಾಜಿ ಸಿಎಂ ಸದಾನಂದ ಗೌಡ ಮಾತನಾಡಿ, ಈ ಬಾರಿ 25 ಸಾವಿರಕ್ಕೂ ಹೆಚ್ಚು ಅಂತರದಿಂದ ಡಿ.ಎನ್.ಜೀವರಾಜ್ ಅವರನ್ನು ಕಾರ್ಯಕರ್ತರು ಗೆಲ್ಲಿಸಬೇಕು. ಶೃಂಗೇರಿ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲು ಅಹರ್ನಿಶಿಯಾಗಿ ದುಡಿಯುವ ನಾಯಕರ ಅಗತ್ಯವಿದೆ. ಹಾಗಾಗಿ ಬಿಜೆಪಿ ಗೆಲ್ಲಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

    ಕಾಂಗ್ರೆಸ್​ಕೇವಲ ಭರವಸೆ ನೀಡಿ ಚುನಾವಣೆ ಮಾಡುತ್ತಿದೆ. ಅವರು ನೀಡಿದ ಭರವಸೆಗಳು ಭರವಸೆಗಳಾಗಿಯೇ ಉಳಿದಿವೆ. ನಾವು ಕೆಲಸ ಮಾಡಿ ಆ ಕೆಲಸವನ್ನು ಜನರಿಗೆ ತಿಳಿಸಿ ಚುನಾವಣೆ ನಡೆಸುತ್ತೇವೆ ಎಂದರು. ಸಿಎಂ ಮುಖ್ಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮುರಡಪ್ಪ, ವಿಜಯಸಂಕಲ್ಪ ಯಾತ್ರೆಯ ಸಂಚಾಲಕ ರಾಜೇಂದ್ರ, ಸಹ ಸಂಚಾಲಕ ದತ್ತಾತ್ರೇಯ ಇತರರಿದ್ದರು.

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts