ಚಿತ್ತಾಪುರ: ಪಟ್ಟಣದ ಬಾಹರಪೇಟ್ ತಾಂಡಾದಲ್ಲಿ ಸೋಮವಾರ ರಾತ್ರಿ ವಿದ್ಯುತ್ ತಂತಿ ತಗುಲಿ ದಂಪತಿ ಮೃತಪಟ್ಟಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಏವೂರ ತಾಂಡಾದ ಶಿವಕುಮಾರ ರಾಠೋಡ್ (30) ಮತ್ತು ಪತ್ನಿ ತಾರಾಬಾಯಿ (26) ಮೃತರು. ಪಟ್ಟಣದಲ್ಲಿ ನಡೆದ ಹಜರತ್ ಚಿತಾಶಾವಲಿ ದಗರ್ಾ ಉರುಸ್ಗೆ ಬಂದಿದ್ದ ಅವರು, ಬಾಹರಪೇಟ್ ತಾಂಡಾದಲ್ಲಿನ ಸಂಬಂಧಿಕರ ಮನೆ ಬಳಿ ವಿದ್ಯುತ್ ಕಂಬದ ಆಸರೆಗೆಂದು ನೆಲದಲ್ಲಿ ಹೂತಿದ್ದ ತಂತಿಗೆ ವಿದ್ಯುತ್ ಪ್ರವಹಿಸಿದ್ದು, ಅಲ್ಲೇ ನೀರು ನಿಂತಿದ್ದರಿಂದ ಅವಘಡ ಸಂಭವಿಸಿದೆ. ಮೊದಲು ಪತ್ನಿ ತಾರಾಬಾಯಿಗೆ ವಿದ್ಯುತ್ ಸ್ಪಶರ್ಿಸಿ ಕೆಳಗೆ ಬಿದ್ದಿದ್ದು, ರಕ್ಷಿಸಲು ಹೋದ ಶಿವಕುಮಾರಗೂ ಶಾಕ್ ತಗುಲಿದೆ. ಇಬ್ಬರನ್ನು ಬಚಾವ್ ಮಾಡಲು ಯತ್ನಿಸಿದ್ದ ಕಿರಣ ಪವಾರ್, ರೂಪಸಿಂಗ್ ಪವಾರ್ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಸಂಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.