More

    ವಿಮಾನ ನಿಲ್ದಾಣ, ನೀರಾವರಿಗೆ ಆದ್ಯತೆ

    ಚಿತ್ರದುರ್ಗ: ಕೋಟೆನಾಡು ಹಿಂದುಳಿದ ಬರಪೀಡಿತ ಜಿಲ್ಲೆ. ಇಲ್ಲಿನ ಜನ ಒಮ್ಮೆ ನನಗೆ ಅವಕಾಶ ಮಾಡಿಕೊಟ್ಟರೆ, ವಿಮಾನ ನಿಲ್ದಾಣ ನಿರ್ಮಿಸುವುದರ ಜೊತೆಗೆ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಭದ್ರಾ ಮೇಲ್ದಂಡೆಗೆ ಆದ್ಯತೆ ನೀಡಿ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಗೋವಿಂದ ಎಂ ಕಾರಜೋಳ ಭರವಸೆ ನೀಡಿದರು.

    ಗುರುವಾರ ನಾಮಪತ್ರ ಸಲ್ಲಿಕೆ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಟ್ಟಿ-ತಾಂಡಾ ಸೇರಿ ಗೊಲ್ಲ, ಕುರುಬ, ನಾಯಕ, ದಲಿತರನ್ನೂ ಒಳಗೊಂಡಂತೆ ಎಲ್ಲ ವರ್ಗದ ಜನರ ಹಿತ ಕಾಯುತ್ತೇನೆ. ಅಗತ್ಯ ಮೂಲಸೌಕರ್ಯ ಒದಗಿಸಲು ದುಡಿಯುತ್ತೇನೆ. ಕ್ಷೇತ್ರವನ್ನು ಅಭಿವೃದ್ಧಿಯಲ್ಲಿ ಕೊಂಡೊಯ್ಯುತ್ತೇನೆ ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts