ಚಿತ್ರದುರ್ಗ: ನಗರದ ಒನಕೆ ಓಬವ್ವ ವೃತ್ತದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಜಿಲ್ಲಾ ಸಮಿತಿಯಿಂದ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನವನ್ನು ನಿವೃತ್ತ ಪ್ರಾಚಾರ್ಯ ಜೆ.ಯಾದವರೆಡ್ಡಿ ಉದ್ಘಾಟಿಸಿದರು.
ಸಮಿತಿ ರಾಜ್ಯ ಉಪಾಧ್ಯಕ್ಷ ಸಿ.ಕೆ.ಗೌಸ್ಪೀರ್, ನಿವೃತ್ತ ಪ್ರಾಚಾರ್ಯ ಡಾ.ಅಶೋಕ್ಕುಮಾರ್ ಸಂಗೇನಹಳ್ಳಿ, ಮಂಜುನಾಥ್, ಮಲ್ಲಿಕಾರ್ಜುನ್, ನಾಗರಾಜ್ ಇತರರಿದ್ದರು.