More

    ವಿಶ್ವ ಪ್ರವಾಸೋದ್ಯಮಕ್ಕೆ ಕಲಾ ತಂಡಗಳ ಮೆರಗು

    ಮೈಸೂರು: ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಮೈಸೂರು ಅರಮನೆಯ ಮುಂಭಾಗದಲ್ಲಿರುವ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಾಂಸ್ಕೃತಿಕ ಮೆರವಣಿಗೆ ಎಲ್ಲರ ಗಮನ ಸೆಳೆಯಿತು.


    ಟ್ರಾವೆಲ್ಸ್ ಅಸೋಸಿಯೇಷನ್, ಹೋಟೆಲ್ ಮಾಲೀಕರ ಸಂಘ ಸೇರಿದಂತೆ ವಿವಿ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮ ಪ್ರವಾಸಿಗರನ್ನು ಆಕರ್ಷಿಸಿತು. ವಿವಿಧ ರಾಜ್ಯಗಳ ಸಂಸ್ಕೃತಿಗಳನ್ನು ಬಿಂಬಿಸುವ ವೇಷಭೂಷಣಗಳು ಎಲ್ಲರ ಗಮನ ಸೆಳೆದವು. ಬ್ಯಾಂಡ್ ಸೆಟ್, ಡೊಳ್ಳುಕುಣಿತ, ಕಂಸಾಳೆ ನೃತ್ಯ, ತಮಟೆ ವಾದನ, ಹುಲಿವೇಷ ಸೇರಿದಂತೆ ನಾನಾ ಕಲಾ ತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ನೋಡುಗರ ಗಮನ ಸೆಳೆದವು.


    ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ, ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ಮಾಡುತ್ತಿರುವುದರಿಂದ ಪ್ರವಾಸೋದ್ಯಮಕ್ಕೆ ಚೇತರಿಕೆ ಸಿಗಲಿದೆ. ದೇಶ ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಲಿದ್ದಾರೆ. ಗೋಲ್ಡ್ ಕಾರ್ಡ್ ಬಗ್ಗೆ ರೂಪುರೇಷೆಗಳನ್ನು ನಿರ್ಧರಿಸಿದ ನಂತರ ಸಭೆಯಲ್ಲಿ ತಿರ್ಮಾನ ಕೈಗೊಂಡು ತಿಳಿಸಲಾಗುವುದು ಎಂದರು.


    ಶಾಸಕ ಜಿ.ಟಿ.ದೇವೇಗೌಡ ಮಾತನಾಡಿ, ಈ ವರ್ಷ ವಿಶ್ವ ಯೋಗಾ ದಿನವನ್ನು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಂದು ಆಚರಿಸಿದ್ದು, ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ಬಂದು ಉದ್ಘಾಟಿಸಿದ್ದರಿಂದ ವಿಶ್ವಮಟ್ಟದಲ್ಲಿ ಮೈಸೂರನ್ನು ಹಾಗೂ ದಸರಾವನ್ನು ನೋಡುವಂತೆ ಮಾಡಿದೆ. ಈ ಬಾರಿಯ ದಸರಾ ಮಹೋತ್ಸವವನ್ನು ಎಲ್ಲರೂ ಸಂಭ್ರಮದಿಂದ ಆಚರಿಸುವ ಮೂಲಕ ಯಶಸ್ವಿಗೊಳಿಸೋಣ ಎಂದರು. ಶಾಸಕರಾದ ಎಲ್ ನಾಗೇಂದ್ರ, ಎಸ್.ಎ.ರಾಮದಾಸ್ ತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts