More

    ವೀರಭದ್ರಸ್ವಾಮಿ ರಥೋತ್ಸವ

    ರಾಯಚೋಟಿ: ಹರಹರ ಮಹಾದೇವ… ಶ್ರೀ ಭದ್ರಕಾಳಿ ಸಮೇತ ರಾಯಚೋಟಿ ವೀರಭದ್ರೇಶ್ವರ ಮಹಾರಾಜಕೀ ಜೈ… ಮಾನವ ಧರ್ಮಕ್ಕೆ ಜಯವಾಗಲಿ… ಧರ್ಮದಿಂದಲೇ ವಿಶ್ವಕ್ಕೆ ಶಾಂತಿ… ಎಂದು ಭಕ್ತರ ಜಯಘೊಷಗಳು ಮೊಳಗುತ್ತಿದ್ದಂತೆ ಆಂಧ್ರಪ್ರದೇಶದ ರಾಯಚೋಟಿ ಕ್ಷೇತ್ರದ ಶ್ರೀ ವೀರಭದ್ರಸ್ವಾಮಿಯ ವಾರ್ಷಿಕ ರಥೋತ್ಸವ ವಿವಿಧ ಜನಪದ ವಾದ್ಯ-ಮೇಳಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.

    ಹುಬ್ಬಳ್ಳಿ-ಧಾರವಾಡ ಮಹಾನಗರ, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆ ಹಾಗೂ ಕಲಬುರ್ಗಿ- ಬೀದರನ ಸಹಸ್ರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಭಕ್ತಿ ಸೇವೆ ಸಲ್ಲಿಸಿದರು. ತೇರು ಮುಂದೆ ಸಾಗುತ್ತಿದ್ದಂತೆ ಭಕ್ತರು ಉತ್ತತ್ತಿ, ಬಾಳೆಹಣ್ಣು, ಕಾಳು ಮೆಣಸು, ಲಿಂಬಿಹಣ್ಣು, ಬೆಂಡು- ಬೆತ್ತಾಸುಗಳನ್ನು ರಥಕ್ಕೆ ಎಸೆದು ಭಕ್ತಿಯ ನಮನ ಸಲ್ಲಿಸಿದರು. ಬಾಳೆಹೊನ್ನೂರಿನ ರಂಭಾಪುರಿ ಪೀಠದ ಶ್ರೀ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಸಾನ್ನಿಧ್ಯದಲ್ಲಿ ಅಲಂಕೃತ ರಥದ ಪೂಜಾ ಕೈಂಕರ್ಯ ಜರುಗಿತು. ವೀರಭದ್ರೇಶ್ವರ ದೇವಾಲಯ ಟ್ರಸ್ಟ್ ಕಾರ್ಯನಿರ್ವಾಹಕ ಅಧಿಕಾರಿ ಟಿ. ಮಂಜುಳಾ, ಗಿರೀಶಕುಮಾರ ಬುಡರಕಟ್ಟಿಮಠ, ರಮೇಶ ಉಳ್ಳಾಗಡ್ಡಿ, ಸಿ.ಎಂ. ಶಿವಶರಣಪ್ಪ ಕಲಬುರ್ಗಿ, ಪಿ.ಎಂ. ಚಿಕ್ಕಮಠ, ಪ್ರಕಾಶ ಅಂದಾನಿಮಠ, ಶಂಕರ ಕುರ್ತಕೋಟಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts