More

    ಶರಣರ ಆದರ್ಶಗಳು ಸಮಾಜಕ್ಕೆ ದಾರಿದೀಪ

    ಹಾವೇರಿ: ಮೌಲ್ಯಯುತ ಜೀವನ ನಡೆಸುವ ಮೂಲಕ ಸಮಾಜಕ್ಕೆ ಜ್ಞಾನದ ಬೆಳಕು ನೀಡಿದ ಕಾಯಕ ಶರಣರ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಿವೆ ಎಂದು ಜಿಪಂ ಸಿಇಒ ರಮೇಶ ದೇಸಾಯಿ ಹೇಳಿದರು.

    ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ದೇವರಾಜ ಅರಸು ಭವನದಲ್ಲಿ ಗುರುವಾರ ಆಯೋಜಿಸಿದ್ದ ಕಾಯಕ ಶರಣರ ಜಯಂತ್ಯುತ್ಸವದಲ್ಲಿ ಮಾತನಾಡಿದರು.

    ಕಾಯಕ ಶರಣರಾದ ಮಾದಾರ ಚೆನ್ನಯ್ಯ, ಉರಿಲಿಂಗ ಪೆದ್ದಿಯವರ, ಡೋಹರ ಕಕ್ಕಯ್ಯ, ಮಾದಾರ ದೂಳಯ್ಯ, ಸಮಗಾರ ಹರಳಯ್ಯನವರು 12ನೇ ಶತಮಾನದಲ್ಲಿಯೇ ವಚನ ಕ್ರಾಂತಿಯನ್ನುಂಟು ಮಾಡಿದರು. ಜನಸಾಮಾನ್ಯರಿಗೂ ಅರ್ಥವಾಗುವಂತಹ ವಚನಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದರು. ಇಂತಹ ಮಹಾತ್ಮರ ತತ್ತಾ್ವದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಶರಣರ ಜಯಂತಿಗಳು ಅರ್ಥಪೂರ್ಣವಾಗಲು ಸಾಧ್ಯ ಎಂದರು.

    ವಚನಕಾರರು ಸಮಾಜದಲ್ಲಿಯ ಅಸ್ಪೃಶ್ಯತೆ, ಅಸಮಾನತೆ, ಮೂಢನಂಬಿಕೆ, ತಾರತಮ್ಯದ ಮನೋಭಾವನೆಯನ್ನು ಹೋಗಲಾಡಿಸಲು ಸಾಕಷ್ಟು ಶ್ರಮವಹಿಸಿದ್ದಾರೆ. ತಾವು ಮಾಡುವ ಕಾಯಕದಲ್ಲಿಯೇ ದೇವರನ್ನು ಕಂಡವರು. ಮೇಲು, ಕೀಳು ಎನ್ನದೇ ಸಮಸಮಾಜ ನಿರ್ವಣಕ್ಕೆ ಶ್ರಮಿಸುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ತೋರಿಸಿಕೊಟ್ಟವರು ಎಂದರು.

    ಉಪನ್ಯಾಸಕ ನೀಡಿದ ಆದಿಜಾಂಬವ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಮಾಳಗಿ, ಶಿವಶರಣರು ನಡೆದು ಬಂದ ದಾರಿ ಹಾಗೂ ಸಮಾಜಕ್ಕೆ ಅವರು ನೀಡಿದ ಕೊಡುಗೆಗಳು ಮಹತ್ವದ್ದಾಗಿವೆ. ಅವುಗಳನ್ನು ಎಲ್ಲರೂ ಅರಿತು ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಬಂಗಾರವಾಗುವುದು ಎಂದರು.

    ತಾಪಂ ಅಧ್ಯಕ್ಷೆ ಕಮಲವ್ವ ಹೇಮನಗೌಡ ಪಾಟೀಲ ಉದ್ಘಾಟಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ ಅಧ್ಯಕ್ಷತೆ ವಹಿಸಿದ್ದರು. ಡಿವೈಎಸ್​ಪಿ ವಿಜಯಕುಮಾರ ಸಂತೋಷ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಹೊನ್ನಪ್ಪ ತಗಡಿನಮನಿ, ಉಡಚಪ್ಪ ಮಾಳಗಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts