More

    ಶಾಲಾ, ಕಾಲೇಜುಗಳಲ್ಲಿ ಯೋಗ ತರಗತಿ

    ಶಿವಮೊಗ್ಗ: ಎಲ್ಲ ಪ್ರೌಢಶಾಲೆ ಮತ್ತು ಪಿಯು ಕಾಲೇಜುಗಳಲ್ಲಿ ಯೋಗ ತರಗತಿ ನಡೆಸುವ ಕುರಿತು ಯೋಜನೆ ರೂಪಿಸಿದ್ದು, ಅದಕ್ಕೆ ಪೂರಕವಾಗಿ ಆಯುಷ್ ಇಲಾಖೆಯಿಂದ ದೈಹಿಕ ಶಿಕ್ಷಕರಿಗೆ ಯೋಗ ತರಬೇತಿ ನೀಡಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೂಚಿಸಿದರು.

    ಶನಿವಾರ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಆಯುಷ್ ಹಾಗೂ ಆಯುರ್ವೆದ ಮಹಾವಿದ್ಯಾಲಯದ ಅಧಿಕಾರಿ ಹಾಗೂ ಉಪನ್ಯಾಸಕರೊಂದಿಗೆ ಸಭೆ ನಡೆಸಿದ ಅವರು, ಈಗಾಗಲೇ 630 ಶಿಕ್ಷಕರಿಗೆ ಯೋಗ ತರಬೇತಿ ನೀಡಿದ್ದು, ಈ ಶಿಕ್ಷಕರನ್ನು ಪ್ರೌಢಶಾಲೆಗಳಲ್ಲಿ ಬಳಸಿಕೊಳ್ಳಬಹುದು. ಅದೇರೀತಿ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರು ಇಲ್ಲದ ಕಾರಣ 132 ಕಾಲೇಜುಗಳಲ್ಲಿ ಯೋಗ ತರಗತಿ ನಡೆಸಲು 25 ಮಂದಿಯನ್ನು ಗೌರವಧನದ ಆಧಾರದಲ್ಲಿ ನೇಮಿಸುವಂತೆ ಸೂಚಿಸಿದರು.

    ನಗರದ ಆಯುರ್ವೆದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಬೋಧನಾ ಆಸ್ಪತ್ರೆಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಅಭಿವೃದ್ಧಿ ಕಾರ್ಯಗಳ ಅನುಷ್ಠಾನದ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

    ಜಿಲ್ಲಾ ಆಯುಷ್ ಅಧಿಕಾರಿ ಪುಷ್ಪಾ ಮಾತನಾಡಿ, ಜಿಲ್ಲಾ ಆಯುಷ್ ಕಚೇರಿಯನ್ನು ಮಹಾವಿದ್ಯಾಲಯದ ಆವರಣದಲ್ಲಿ ನಿರ್ವಿುಸಲು ನಿವೇಶನ ಒದಗಿಸಬೇಕು. ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಪಂಚಕರ್ಮ ಘಟಕ ಕಟ್ಟಡ ಹಳೆಯದ್ದಾಗಿದ್ದು, ಹೊಸ ಕಟ್ಟಡ ಅಥವಾ ಬದಲಿ ಕಟ್ಟಡ ವ್ಯವಸ್ಥೆ ಮಾಡಬೇಕು ಎಂದರು.

    ಜಿಪಂ ಸಿಇಒ ಎಂ.ಎಲ್.ವೈಶಾಲಿ, ಮೇಯರ್ ಸುವರ್ಣಾ ಶಂಕರ್, ಆಯುರ್ವೆದ ಮಹಾವಿದ್ಯಾಲಯ ಹಾಗೂ ಬೋಧನಾ ಆಸ್ಪತ್ರೆ ಪ್ರಾಚಾರ್ಯ ಡಾ. ಮಹಮ್ಮದ್ ಗೌಸ್ ದೊಡ್ಮನಿ, ವೈದ್ಯಾಧಿಕಾರಿ ಡಾ. ಕುಮಾರ ಸಾಗರ್ ಇತರರಿದ್ದರು.

    ಕರೊನಾ ಸಂದರ್ಭದಲ್ಲಿ ಆಯುಷ್ ಇಲಾಖೆಯಿಂದ ಆಶಾ ಕಾರ್ಯಕರ್ತೆಯರಿಗೆ ಚ್ಯವನ್​ಪ್ರಾಶ ಒದಗಿಸಲಾಗುತ್ತಿದೆ. ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಗಳು ಆಯುಷ್ ಇಲಾಖೆಯಲ್ಲಿ ಲಭ್ಯವಿದ್ದು, ಅದನ್ನು ಬಳಸಲಾಗುತ್ತಿದೆ. ಇಲಾಖೆಯಿಂದ ನೀಡುತ್ತಿರುವ ಸೇವೆಗಳ ಗುಣಮಟ್ಟದ ಕುರಿತು ಅಧ್ಯಯನ ನಡೆಸುವ ಅಗತ್ಯವಿದೆ.

    | ಕೆ.ಬಿ.ಶಿವಕುಮಾರ್, ಡಿಸಿ

    ಜಿಲ್ಲಾ ಆಯುಷ್ ಕಚೇರಿ ವ್ಯಾಪ್ತಿಯಲ್ಲಿರುವ ಚಿಕಿತ್ಸಾಲಯ ಮತ್ತು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಪುರಪ್ಪೆಮನೆ, ವಿಜಾಪುರ, ಬೆಳ್ಳೂರು, ತ್ರಿಣಿವೆ ಸರ್ಕಾರಿ ಆಯುರ್ವೆದ ಚಿಕಿತ್ಸಾಲಯಗಳಲ್ಲಿ ವೈದ್ಯಾಧಿಕಾರಿ ಹುದ್ದೆಗಳು ಮಾತ್ರ ಮಂಜೂರಾಗಿದ್ದು, 5 ‘ಡಿ’ ಗ್ರೂಪ್ ಹುದ್ದೆಗಳನ್ನು ಮಂಜೂರು ಮಾಡಬೇಕಾಗಿದೆ.

    | ಪುಷ್ಪಾ, ಜಿಲ್ಲಾ ಆಯುಷ್ ಅಧಿಕಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts