More

    ಶಾಸಕ ಕಾಶಪ್ಪನವರ ಭೇಟಿ ಮಾಡಿ ಸಚಿವ ತಿಮ್ಮಾಪುರ

    ಬಾಗಲಕೋಟೆ: ಬಾಗಲಕೋಟೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿ ತೀವ್ರ ಅಸಮಧಾನಗೊಂಡಿರುವ ವೀಣಾ ಕಾಶಪ್ಪನವರ ಹಾಗೂ ಅವರ ಪತಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಅವರ ಆಕ್ರೋಶ ಶಮನ ಮಾಡಲು ಪಕ್ಷದಲ್ಲಿ ಬೆಳವಣಿಗೆಗಳು ನಡೆದಿವೆ.

    ಇದೀಗ ಶಾಸಕ ವಿಜಯಾನಂದ ಕಾಶಪ್ಪನವರ ಅಸಮಧಾನ ಶಮನ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕೂಡ ಒಂದೆಜ್ಜೆ ಮುಂದಿಟ್ಟಿದ್ದಾರೆ. ಭಾನುವಾರ ನವನಗರದ ಕಾಶಪ್ಪನವರ ಮನೆಗೆ ತೆರಳಿದ ಸಚಿವರು, ಶಾಸಕ ವಿಜಯಾನಂದ ಕಾಶಪ್ಪನವರ ಜೊತೆ ಮಾತುಕತೆ ನಡೆಸಿ, ಅವರನ್ನು ಸಮಧಾನಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

    ಶಾಸಕ ಕಾಶಪ್ಪನವರ ಅವರನ್ನು ಭೇಟಿ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಸಚಿವ ಆರ್.ಬಿ.ತಿಮ್ಮಾಪುರ, ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಿಕ್ಕಟ್ಟು ಇಲ್ಲ. ಕಾಶಪ್ಪನರ ಕುಟುಂಬ ಮೊದನಿಂದಲೂ ಕಾಂಗ್ರೆಸ್ ಜೊತೆ ಇದ್ದ ಕುಟುಂಬವಾಗಿದೆ. ಟಿಕೆಟ್ ಸಿಕ್ಕಿಲ್ಲವೆಂದು ಅಸಮಧಾನ ಆಗುವುದು ಬೇಡ. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡಿಸಿ ಸಮಸ್ಯೆ ಬಗೆಹರಿಸಲಿದ್ದೇವೆ. ಮಾರ್ಚ್ ೨೮ ರಂದು ಸಿಎಂ ಜೊತೆ ಮಾತನಾಡಲು ಸಮಯ ನಿಗದಿ ಪಡಿಸಲಾಗಿದೆ ಎಂದು ಸಚಿವ ತಿಮ್ಮಾಪುರ ಹೇಳಿದ್ದಾರೆ.

    ಕ್ಷೇತ್ರದಲ್ಲಿ ಕಾಂಗ್ರೆಸ್ ನ ಎಲ್ಲ ಮುಖಂಡರು, ಕಾರ್ಯಕರ್ತರು ಒಟ್ಟಾಗಿ ಚುನಾವಣೆಯನ್ನು ಎದುರಿಸಲಿದ್ದೇವೆ. ಈ ಬಗ್ಗೆ ಕಾರ್ಯಕರ್ತರಿಗೆ ಯಾವುದೇ ಆತಂಕ ಬೇಡ. ಕ್ಷೇತ್ರದಲ್ಲಿ ಈ ಸಲ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts