More

    ಶಾಸಕ ಪ್ರೀತಮ್ ಗೌಡ ಐವತ್ತು ಸವಾಲು ಹಾಕಲಿ!?

    ಹಾಸನ: ಶಾಸಕ ಪ್ರೀತಮ್ ಗೌಡ ಐವತ್ತು ಸವಾಲು ಹಾಕಲಿ, ಅದನ್ನು ಎದುರಿಸುವ ಶಕ್ತಿ ನಮ್ಮ ಕುಟುಂಬಕ್ಕೆ ಮತ್ತು ಜೆಡಿಎಸ್ ಕಾರ್ಯಕರ್ತರಿಗಿದೆ. ಈ ಹಿಂದೆಯೇ ಅವರ ಸವಾಲನ್ನು ಸ್ವೀಕರಿಸಿದ್ದೇವೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿದರು.


    ಜಿಲ್ಲಾ ಸವಿತಾ ಸಂಗೀತ ಮಂಗಳವಾದ್ಯ ಕಲಾವಿದರ ಸಂಘ ಆಯೋಜಿಸಿದ್ದ ಸಂಗೀತ ಸಮ್ಮೇಳನ ಮತ್ತು ನಾದಬ್ರಹ್ಮ ತ್ಯಾಗರಾಜಸ್ವಾಮಿ, ಪುರಂದರ ಮತ್ತು ಕನಕದಾಸರ ಆರಾಧನಾ ಮಹೋತ್ಸವಕ್ಕೆ ಮಂಗಳವಾರ ನಗರದ ಹಾಸನಾಂಬ ದೇವಸ್ಥಾನದ ಬಳಿ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.


    ಎಚ್.ಡಿ. ರೇವಣ್ಣ ಅವರು ಹಾಸನ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ ಅವರ ವಿರುದ್ಧ 50 ಸಾವಿರ ಮತಗಳ ಅಂತರದಿಂದ ಗೆಲ್ಲುವುದಾಗಿ ಶಾಸಕ ಪ್ರೀತಮ್ ಗೌಡ ಸವಾಲು ಹಾಕಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಶಾಸಕ ಪ್ರೀತಂಗೌಡ ಅವರು ಹಾಕಿರುವ ಸವಾಲನ್ನು ರೇವಣ್ಣ ಕುಟುಂಬ ಯಾವಾಗಲೋ ಸ್ವೀಕರಿಸಿ ಆಗಿದೆ. ನಾವು ಯಾವುದೇ ಕಾರಣಕ್ಕೂ ಹಿಂದೆ ಹೋಗುವವರಲ್ಲ ಪುನರುಚ್ಚರಿಸಿದರು.


    ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ತಾಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ನನ್ನ ವಿರುದ್ಧ 15 ಸಾವಿರ ಲೀಡ್ ಪಡೆಯಲಿದ್ದಾರೆ ಎಂಬುದಾಗಿ ಹೇಳಿಕೊಂಡಿದ್ದರು. ಆದರೆ ನಾನು ಅವರಿಗಿಂತ 16 ಸಾವಿರ ಮತಗಳ ಲೀಡ್ ಪಡೆಯಲಿಲ್ಲವೇ ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.


    ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ಜನವರಿ 17 ರವರೆಗೆ ಸಮಯ ಕೇಳಿದ್ದಾರೆ. ಹಾಗೆಯೇ ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ ಅವರೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಹಾಗಾಗಿ ಯಾವುದೇ ಸಮಸ್ಯೆ ಇಲ್ಲ. ಇನ್ನು ಹತ್ತು ದಿನಗಳಲ್ಲಿ ಹಾಸನ ಜಿಲ್ಲೆಯ ಎಲ್ಲ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts